Advertisement
ಸುದ್ದಿಗಳು

ದೀಪಾವಳಿ ಹಬ್ಬ | ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿಏರಿಕೆ | ಖಾಸಗಿ ಬಸ್ ಗಳ ದರ ಎರಡು ಪಟ್ಟು ಹೆಚ್ಚಳ | ಹಬ್ಬವೆಂದರೆ ಸಾಮಾನ್ಯ ಜನರಿಗೆ ಪ್ರತೀ ಬಾರಿ ಏರಿಕೆಯ ಬಿಸಿ…!‌ |

Share

ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.

Advertisement
Advertisement

ದೀಪಾವಳಿ ಸಂದರ್ಭ  ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್‌ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್‌ ಆಗಿವೆ. ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ  ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.

Advertisement

ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ  ಏರಿಕೆಯಾಗಿದ್ದು, ಈ ವರ್ಷ 100 ರಿಂದ‌ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

6 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 day ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago