Advertisement
ಸುದ್ದಿಗಳು

ದೀಪಾವಳಿ ಹಬ್ಬ | ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿಏರಿಕೆ | ಖಾಸಗಿ ಬಸ್ ಗಳ ದರ ಎರಡು ಪಟ್ಟು ಹೆಚ್ಚಳ | ಹಬ್ಬವೆಂದರೆ ಸಾಮಾನ್ಯ ಜನರಿಗೆ ಪ್ರತೀ ಬಾರಿ ಏರಿಕೆಯ ಬಿಸಿ…!‌ |

Share

ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.

ದೀಪಾವಳಿ ಸಂದರ್ಭ  ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್‌ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್‌ ಆಗಿವೆ. ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ  ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.

ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ  ಏರಿಕೆಯಾಗಿದ್ದು, ಈ ವರ್ಷ 100 ರಿಂದ‌ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

9 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

17 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

24 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago