ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.
ದೀಪಾವಳಿ ಸಂದರ್ಭ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್ ಆಗಿವೆ. ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.
ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ ಏರಿಕೆಯಾಗಿದ್ದು, ಈ ವರ್ಷ 100 ರಿಂದ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…