ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.
ದೀಪಾವಳಿ ಸಂದರ್ಭ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್ ಆಗಿವೆ. ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.
ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ ಏರಿಕೆಯಾಗಿದ್ದು, ಈ ವರ್ಷ 100 ರಿಂದ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…