ಸುದ್ದಿಗಳು

ಮೊಗ್ರದಲ್ಲಿ ದೀಪಾವಳಿ ಆಚರಣೆ | ಹಣತೆಗಳಿಂದ ಕಂಗೊಳಿಸಿದ ಮೊಗ್ರದ ಗ್ರಾಮಸೇತು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಜನರಿಂದಲೇ ನಿರ್ಮಾಣವಾದ ಕಾಲು ಸಂಕ ಗ್ರಾಮಸೇತು ಮೇಲೆ ಹಣತೆ ಬೆಳಗಿ ದೀಪಾವಳಿಯನ್ನು ಬುಧವಾರ ರಾತ್ರಿ ಆಚರಣೆ ಮಾಡಲಾಯಿತು.

Advertisement
Advertisement

ಊರಿನ ಜನರು ಸೇತುವೆಯ ಮೇಲೆ ಹಣತೆ ಬೆಳಗಿದರು. ಗ್ರಾಮದಲ್ಲಿ ಅಭಿವೃದ್ಧಿಯ ಬೆಳಕು ಹರಿಯಲಿ ಹಾಗೂ ಮೊಗ್ರದಲ್ಲಿ ಶಾಶ್ವತವಾದ ಸೇತುವೆ ನಿರ್ಮಾಣವಾಗಲಿ ಎಂದು ಪ್ರಾರ್ಥಿಸಿದರು. ಕಾರ್ಯಕ್ರಮದ ಬಳಿಕ ವೀಕ್ಷಿತ್‌ ಕುತ್ಯಾಳ ಹಾಗೂ ಉಜಿತ್‌ ಶ್ಯಾಂ ಚಿಕ್ಮುಳಿ ಅವರಿಂದ ಹಾಡು ಹಾಗೂ ಕೊಳಲು ವಾದನ ನಡೆಯಿತು.ಗ್ರಾಮಭಾರತ ತಂಡ ಕಾರ್ಯಕ್ರಮ ಆಯೋಜನೆ ಮಾಡಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜೇಸಿ ಸದಸ್ಯ, ಸಾಮಾಜಿಕ ಕಾರ್ಯಕರ್ತ ಶಶಿಧರ ಪಳಂಗಾಯ ಮಾತನಾಡಿ,” ಬೆಳಕಿನ ಮಹತ್ವ ದೀಪಾವಳಿಯಂದು ತಿಳಿಯುತ್ತದೆ. ಈ ದಿನ ಬೆಳಕಿನ ಮಹತ್ವ ತಿಳಿದುಕೊಳ್ಳಬೇಕಾದ್ದು ಅಗತ್ಯವೂ ಹೌದು.  ದೀಪಾವಳಿಯಂದು ನರಕಚತುರ್ದಶಿ ಕೂಡಾ ಮಹತ್ವ ಪಡೆದಿದೆ, ಅಂದು ನರಕಾಸುರನನ್ನು ಸಂಹಾರ ಮಾಡಿದ ದಿನ ಎಂದು ಕರೆಯಲಾಗುತ್ತದೆ. ಅಸುರ ಎಂದರೆ ಋಣಾತ್ಮಕ ಅಂಶಗಳು ನೆನಪಿಗೆ ಬರುತ್ತವೆ. ಇಂದು ಋಣಾತ್ಮಕ ಅಂಶಗಳಲ್ಲಿ ಅವಿಶ್ವಾಸ, ನಂಬಿಕೆದ್ರೋಹ, ಹೇಳಿದಂತೆ ನಡೆದುಕೊಳ್ಳದೇ ಇರುವುದು  ಎಲ್ಲವೂ ಬರುತ್ತದೆ. ಇದೆಲ್ಲಾ ಅಸುರ ಶಕ್ತಿಗಳು ಎಂದು ಪರಿಗಣಿಸಬಹುದು. ಇದೆಲ್ಲಾ ಮೆಟ್ಟಿ ನಿಂತು ಜನರು ಒಂದಾಗಿ ಕಿರು ಕಾಲುಸಂಕ ನಿರ್ಮಾಣ ಮಾಡಿರುವುದು ಅಭಿನಂದನಾರ್ಹವಾಗಿದೆ. ಮುಂದೆ ಸಮರ್ಪಕ ಸೇತುವೆಯಾಗಲಿ ಎಂದು ಹಾರೈಸಿದರು. ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಅಪಾರ ಶಕ್ತಿ ಇದೆ, ಜನಸಾಮಾನ್ಯ ಕೂಡಾ ಈ ದೇಶದ ಪ್ರಧಾನಿಯಾಗಬಹುದು ಎಂದು ತೋರಿಸಿದ ದೇಶ” ಎಂದರು.

Advertisement

ಗ್ರಾಮ ಭಾರತ ತಂಡದ ಅಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ ಮಾತನಾಡಿ, “ಒಂದು ಒಳ್ಳೆಯ ದಿನ ಎಲ್ಲರೂ ಜೊತೆಯಾಗಿ ಸೇರುವುದು  ಉತ್ತಮ ಸಂಪ್ರದಾಯ. ಬದುಕಿನದ್ದಕ್ಕೂ ನಾವೇನು ಮಾಡಿದ್ದೇವೆ ಎನ್ನುವುದು  ಮುಖ್ಯವಾಗುತ್ತದೆ. ನಾವೆಲ್ಲಾ ಮುಂದಿನ ದಿನಗಳಲ್ಲಿಯೂ ಜನಪರವಾಗಿ ಹೆಜ್ಜೆ ಇಡಬೇಕಾಗಿದೆ” ಎಂದರು.

ಸಾಮಾಜಿಕ ಕಾರ್ಯಕರ್ತ ಲಕ್ಷ್ಮೀಶ ಗಬ್ಲಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, “ದೀಪಾವಳಿ ಹಬ್ಬದ ಮೊದಲ ದಿನ ನರಕಾಸುರ ಸಂಹಾರ ಮಾಡಿದ ದಿನವಾದರೆ, ಇನ್ನೊಂದು ದೀಪಗಳ ಮೂಲಕ ಬೆಳಗುವುದು. ಬೆಳಕು ಎಂದರೆ ಜ್ಞಾನವೂ ಹೌದು. ಕತ್ತಲು ದೂರವಾಗಿ ಬೆಳಗಬೇಕಾದ ದಿನಗಳು ಬಂದಿವೆ” ಎಂದರು.

ಗ್ರಾಮ ಭಾರತ ತಂಡದ ಸಂಚಾಲಕ ಸುಧಾಕರ ಮಲ್ಕಜೆ ಸ್ವಾಗತಿಸಿದರು. ಗ್ರಾಮ ಭಾರತ ತಂಡದ ಕಾರ್ಯದರ್ಶಿ ಮಂಜುನಾಥ ಮುತ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಗ್ರಾಮಭಾರತ ತಂಡವು ಈ ಕಾರ್ಯಕ್ರಮ ಆಯೋಜನೆ ಮಾಡಿತ್ತು.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

5 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

6 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

7 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

8 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

9 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago