Advertisement
ಸುದ್ದಿಗಳು

ಮೊಗ್ರದಲ್ಲಿ ದೀಪಾವಳಿ ಆಚರಣೆ | ಹಣತೆಗಳಿಂದ ಕಂಗೊಳಿಸಿದ ಮೊಗ್ರದ ಗ್ರಾಮಸೇತು

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಜನರಿಂದಲೇ ನಿರ್ಮಾಣವಾದ ಕಾಲು ಸಂಕ ಗ್ರಾಮಸೇತು ಮೇಲೆ ಹಣತೆ ಬೆಳಗಿ ದೀಪಾವಳಿಯನ್ನು ಬುಧವಾರ ರಾತ್ರಿ ಆಚರಣೆ ಮಾಡಲಾಯಿತು.

ಊರಿನ ಜನರು ಸೇತುವೆಯ ಮೇಲೆ ಹಣತೆ ಬೆಳಗಿದರು. ಗ್ರಾಮದಲ್ಲಿ ಅಭಿವೃದ್ಧಿಯ ಬೆಳಕು ಹರಿಯಲಿ ಹಾಗೂ ಮೊಗ್ರದಲ್ಲಿ ಶಾಶ್ವತವಾದ ಸೇತುವೆ ನಿರ್ಮಾಣವಾಗಲಿ ಎಂದು ಪ್ರಾರ್ಥಿಸಿದರು. ಕಾರ್ಯಕ್ರಮದ ಬಳಿಕ ವೀಕ್ಷಿತ್‌ ಕುತ್ಯಾಳ ಹಾಗೂ ಉಜಿತ್‌ ಶ್ಯಾಂ ಚಿಕ್ಮುಳಿ ಅವರಿಂದ ಹಾಡು ಹಾಗೂ ಕೊಳಲು ವಾದನ ನಡೆಯಿತು.ಗ್ರಾಮಭಾರತ ತಂಡ ಕಾರ್ಯಕ್ರಮ ಆಯೋಜನೆ ಮಾಡಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜೇಸಿ ಸದಸ್ಯ, ಸಾಮಾಜಿಕ ಕಾರ್ಯಕರ್ತ ಶಶಿಧರ ಪಳಂಗಾಯ ಮಾತನಾಡಿ,” ಬೆಳಕಿನ ಮಹತ್ವ ದೀಪಾವಳಿಯಂದು ತಿಳಿಯುತ್ತದೆ. ಈ ದಿನ ಬೆಳಕಿನ ಮಹತ್ವ ತಿಳಿದುಕೊಳ್ಳಬೇಕಾದ್ದು ಅಗತ್ಯವೂ ಹೌದು.  ದೀಪಾವಳಿಯಂದು ನರಕಚತುರ್ದಶಿ ಕೂಡಾ ಮಹತ್ವ ಪಡೆದಿದೆ, ಅಂದು ನರಕಾಸುರನನ್ನು ಸಂಹಾರ ಮಾಡಿದ ದಿನ ಎಂದು ಕರೆಯಲಾಗುತ್ತದೆ. ಅಸುರ ಎಂದರೆ ಋಣಾತ್ಮಕ ಅಂಶಗಳು ನೆನಪಿಗೆ ಬರುತ್ತವೆ. ಇಂದು ಋಣಾತ್ಮಕ ಅಂಶಗಳಲ್ಲಿ ಅವಿಶ್ವಾಸ, ನಂಬಿಕೆದ್ರೋಹ, ಹೇಳಿದಂತೆ ನಡೆದುಕೊಳ್ಳದೇ ಇರುವುದು  ಎಲ್ಲವೂ ಬರುತ್ತದೆ. ಇದೆಲ್ಲಾ ಅಸುರ ಶಕ್ತಿಗಳು ಎಂದು ಪರಿಗಣಿಸಬಹುದು. ಇದೆಲ್ಲಾ ಮೆಟ್ಟಿ ನಿಂತು ಜನರು ಒಂದಾಗಿ ಕಿರು ಕಾಲುಸಂಕ ನಿರ್ಮಾಣ ಮಾಡಿರುವುದು ಅಭಿನಂದನಾರ್ಹವಾಗಿದೆ. ಮುಂದೆ ಸಮರ್ಪಕ ಸೇತುವೆಯಾಗಲಿ ಎಂದು ಹಾರೈಸಿದರು. ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಅಪಾರ ಶಕ್ತಿ ಇದೆ, ಜನಸಾಮಾನ್ಯ ಕೂಡಾ ಈ ದೇಶದ ಪ್ರಧಾನಿಯಾಗಬಹುದು ಎಂದು ತೋರಿಸಿದ ದೇಶ” ಎಂದರು.

ಗ್ರಾಮ ಭಾರತ ತಂಡದ ಅಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ ಮಾತನಾಡಿ, “ಒಂದು ಒಳ್ಳೆಯ ದಿನ ಎಲ್ಲರೂ ಜೊತೆಯಾಗಿ ಸೇರುವುದು  ಉತ್ತಮ ಸಂಪ್ರದಾಯ. ಬದುಕಿನದ್ದಕ್ಕೂ ನಾವೇನು ಮಾಡಿದ್ದೇವೆ ಎನ್ನುವುದು  ಮುಖ್ಯವಾಗುತ್ತದೆ. ನಾವೆಲ್ಲಾ ಮುಂದಿನ ದಿನಗಳಲ್ಲಿಯೂ ಜನಪರವಾಗಿ ಹೆಜ್ಜೆ ಇಡಬೇಕಾಗಿದೆ” ಎಂದರು.

ಸಾಮಾಜಿಕ ಕಾರ್ಯಕರ್ತ ಲಕ್ಷ್ಮೀಶ ಗಬ್ಲಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, “ದೀಪಾವಳಿ ಹಬ್ಬದ ಮೊದಲ ದಿನ ನರಕಾಸುರ ಸಂಹಾರ ಮಾಡಿದ ದಿನವಾದರೆ, ಇನ್ನೊಂದು ದೀಪಗಳ ಮೂಲಕ ಬೆಳಗುವುದು. ಬೆಳಕು ಎಂದರೆ ಜ್ಞಾನವೂ ಹೌದು. ಕತ್ತಲು ದೂರವಾಗಿ ಬೆಳಗಬೇಕಾದ ದಿನಗಳು ಬಂದಿವೆ” ಎಂದರು.

ಗ್ರಾಮ ಭಾರತ ತಂಡದ ಸಂಚಾಲಕ ಸುಧಾಕರ ಮಲ್ಕಜೆ ಸ್ವಾಗತಿಸಿದರು. ಗ್ರಾಮ ಭಾರತ ತಂಡದ ಕಾರ್ಯದರ್ಶಿ ಮಂಜುನಾಥ ಮುತ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಗ್ರಾಮಭಾರತ ತಂಡವು ಈ ಕಾರ್ಯಕ್ರಮ ಆಯೋಜನೆ ಮಾಡಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

4 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

5 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

5 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

11 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

12 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

13 hours ago