Advertisement
ಸುದ್ದಿಗಳು

ಪತ್ರಕರ್ತರಿಗೆ ಹಬ್ಬದ ಸಿಹಿಯ ಜೊತೆಗೆ “ಕ್ಯಾಶ್‌ ಗಿಫ್ಟ್‌ ” | ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಈ “ಗಿಫ್ಟ್‌” ಬಗ್ಗೆ ಸಿಎಂ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ |

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ  ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ದೀಪಾವಳಿ ಸಂದರ್ಭ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಸಿಹಿ ತಿಂಡಿಗಳ ಪೊಟ್ಟಣವು ಉಡುಗೊರೆಯಾಗಿ ನೀಡಲಾಗಿತ್ತು. ಈ ಸಂದರ್ಭ ಕೆಲವು ಆಯ್ದ ಪತ್ರಕರ್ತರಿಗೆ “ನಗದು” ಗಿಫ್ಟ್‌ ಕೂಡಾ ನೀಡಲಾಗಿತ್ತು, ಕೆಲವು ಪತ್ರಕರ್ತರು ನಿರಾಕರಿಸಿದ್ದರು ಎನ್ನುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಗತಿ.

ಈ ನಡುವೆಯೇ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು,  ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್‌ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?  ಸಿಎಂ ಅವರೇ , ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಟ್ವೀಟ್‌ ಮಾಡಿದೆ.

ಈ ನಡುವೆ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುವ ಜನಾಧಿಕಾರ ಸಂಘರ್ಷ ಪರಿಷತ್‌ ಲೋಕಾಯುಕ್ತಕ್ಕೆ ದೂರು ನೀಡಿದೆ. ಒಂದು ವೇಳೆ ಇದು ನಿಜವಾಗಿದ್ದಲ್ಲಿ ಸೂಕ್ತ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಇದು ನಿಜವೇ ಆಗಿದ್ದರೆ ಬಹಳ ಅನ್ಯಾಯ ಮಾಡ್ತಾ ಇದೆ ಈ ಸರಕಾರ ಎಸ್ಸಿ ಎಸ್ಟಿ ಗಳಿಗೆ ಮೀಸಲಾತಿ ಹೆಚ್ಚಿಸಿದ್ದೇವೆ ಅಂತ ಹೇಳಿಕೊಂಡು ದಲಿತ ಮಕ್ಕಳ ಭವಿಷ್ಯವನ್ನು ವಿದ್ಯಾರ್ಥಿ ಜೀವನದಲ್ಲಿಯೇ ಮುಂದೆ ಬರದ ಹಾಗೆ ಮೊಳಕೆಯಲ್ಲಿ ಚಿವುಟ್ತಾಯಿದೆ. ಯಾಕೆಂದ್ರೆ ಸರಕಾರಿ ಶಾಲೆ ಕಾಲೇಜುಗಳಲ್ಲಿ ಪಾಪದ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಕೊಡದೆ ಅವರ ಬದುಕನ್ನು ನಿರ್ನಾಮ ಮಾಡ್ತಾ ಇದ್ದಾರೆ ಭವಿಷ್ಯದಲ್ಲಿ ಗುಲಾಮರನ್ನಾಗಿಸುವ ಹುನ್ನಾರ ಇದು. ಸುಳ್ಳು ವಂಚನೆ ಮೋಸ ಮಾಡಿ ಆದರೂ ಸರಕಾರ ನಡೆಸಬೇಕೇ..?ಹಿಂದುರಾಷ್ಟ್ರದಲ್ಲಿ ಶ್ರೀಮಂತರು ಮತ್ತು ಉನ್ನತ ವರ್ಗದವರು ಮಾತ್ರ ಬದುಕಬೇಕಾ ಇದು ನಮ್ಮ ದಲಿತ ಸಮುದಾಯ ಮತ್ತು ಶೂದ್ರ ಸಮುದಾಯ ಅರ್ಥ ಮಾಡಿಕೊಳ್ಳಬೇಕಾಗಿದೆ.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 hour ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

2 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

3 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

4 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

16 hours ago