ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ದೀಪಾವಳಿ ಸಂದರ್ಭ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಸಿಹಿ ತಿಂಡಿಗಳ ಪೊಟ್ಟಣವು ಉಡುಗೊರೆಯಾಗಿ ನೀಡಲಾಗಿತ್ತು. ಈ ಸಂದರ್ಭ ಕೆಲವು ಆಯ್ದ ಪತ್ರಕರ್ತರಿಗೆ “ನಗದು” ಗಿಫ್ಟ್ ಕೂಡಾ ನೀಡಲಾಗಿತ್ತು, ಕೆಲವು ಪತ್ರಕರ್ತರು ನಿರಾಕರಿಸಿದ್ದರು ಎನ್ನುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಗತಿ.
ಈ ನಡುವೆಯೇ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ? ಸಿಎಂ ಅವರೇ , ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಟ್ವೀಟ್ ಮಾಡಿದೆ.
ಈ ನಡುವೆ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುವ ಜನಾಧಿಕಾರ ಸಂಘರ್ಷ ಪರಿಷತ್ ಲೋಕಾಯುಕ್ತಕ್ಕೆ ದೂರು ನೀಡಿದೆ. ಒಂದು ವೇಳೆ ಇದು ನಿಜವಾಗಿದ್ದಲ್ಲಿ ಸೂಕ್ತ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
View Comments
ಇದು ನಿಜವೇ ಆಗಿದ್ದರೆ ಬಹಳ ಅನ್ಯಾಯ ಮಾಡ್ತಾ ಇದೆ ಈ ಸರಕಾರ ಎಸ್ಸಿ ಎಸ್ಟಿ ಗಳಿಗೆ ಮೀಸಲಾತಿ ಹೆಚ್ಚಿಸಿದ್ದೇವೆ ಅಂತ ಹೇಳಿಕೊಂಡು ದಲಿತ ಮಕ್ಕಳ ಭವಿಷ್ಯವನ್ನು ವಿದ್ಯಾರ್ಥಿ ಜೀವನದಲ್ಲಿಯೇ ಮುಂದೆ ಬರದ ಹಾಗೆ ಮೊಳಕೆಯಲ್ಲಿ ಚಿವುಟ್ತಾಯಿದೆ. ಯಾಕೆಂದ್ರೆ ಸರಕಾರಿ ಶಾಲೆ ಕಾಲೇಜುಗಳಲ್ಲಿ ಪಾಪದ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಕೊಡದೆ ಅವರ ಬದುಕನ್ನು ನಿರ್ನಾಮ ಮಾಡ್ತಾ ಇದ್ದಾರೆ ಭವಿಷ್ಯದಲ್ಲಿ ಗುಲಾಮರನ್ನಾಗಿಸುವ ಹುನ್ನಾರ ಇದು. ಸುಳ್ಳು ವಂಚನೆ ಮೋಸ ಮಾಡಿ ಆದರೂ ಸರಕಾರ ನಡೆಸಬೇಕೇ..?ಹಿಂದುರಾಷ್ಟ್ರದಲ್ಲಿ ಶ್ರೀಮಂತರು ಮತ್ತು ಉನ್ನತ ವರ್ಗದವರು ಮಾತ್ರ ಬದುಕಬೇಕಾ ಇದು ನಮ್ಮ ದಲಿತ ಸಮುದಾಯ ಮತ್ತು ಶೂದ್ರ ಸಮುದಾಯ ಅರ್ಥ ಮಾಡಿಕೊಳ್ಳಬೇಕಾಗಿದೆ.