Advertisement
ಸುದ್ದಿಗಳು

ಪತ್ರಕರ್ತರಿಗೆ ಹಬ್ಬದ ಸಿಹಿಯ ಜೊತೆಗೆ “ಕ್ಯಾಶ್‌ ಗಿಫ್ಟ್‌ ” | ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಈ “ಗಿಫ್ಟ್‌” ಬಗ್ಗೆ ಸಿಎಂ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ |

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ  ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ದೀಪಾವಳಿ ಸಂದರ್ಭ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಸಿಹಿ ತಿಂಡಿಗಳ ಪೊಟ್ಟಣವು ಉಡುಗೊರೆಯಾಗಿ ನೀಡಲಾಗಿತ್ತು. ಈ ಸಂದರ್ಭ ಕೆಲವು ಆಯ್ದ ಪತ್ರಕರ್ತರಿಗೆ “ನಗದು” ಗಿಫ್ಟ್‌ ಕೂಡಾ ನೀಡಲಾಗಿತ್ತು, ಕೆಲವು ಪತ್ರಕರ್ತರು ನಿರಾಕರಿಸಿದ್ದರು ಎನ್ನುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಗತಿ.

ಈ ನಡುವೆಯೇ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು,  ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್‌ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?  ಸಿಎಂ ಅವರೇ , ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಟ್ವೀಟ್‌ ಮಾಡಿದೆ.

ಈ ನಡುವೆ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುವ ಜನಾಧಿಕಾರ ಸಂಘರ್ಷ ಪರಿಷತ್‌ ಲೋಕಾಯುಕ್ತಕ್ಕೆ ದೂರು ನೀಡಿದೆ. ಒಂದು ವೇಳೆ ಇದು ನಿಜವಾಗಿದ್ದಲ್ಲಿ ಸೂಕ್ತ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಇದು ನಿಜವೇ ಆಗಿದ್ದರೆ ಬಹಳ ಅನ್ಯಾಯ ಮಾಡ್ತಾ ಇದೆ ಈ ಸರಕಾರ ಎಸ್ಸಿ ಎಸ್ಟಿ ಗಳಿಗೆ ಮೀಸಲಾತಿ ಹೆಚ್ಚಿಸಿದ್ದೇವೆ ಅಂತ ಹೇಳಿಕೊಂಡು ದಲಿತ ಮಕ್ಕಳ ಭವಿಷ್ಯವನ್ನು ವಿದ್ಯಾರ್ಥಿ ಜೀವನದಲ್ಲಿಯೇ ಮುಂದೆ ಬರದ ಹಾಗೆ ಮೊಳಕೆಯಲ್ಲಿ ಚಿವುಟ್ತಾಯಿದೆ. ಯಾಕೆಂದ್ರೆ ಸರಕಾರಿ ಶಾಲೆ ಕಾಲೇಜುಗಳಲ್ಲಿ ಪಾಪದ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಕೊಡದೆ ಅವರ ಬದುಕನ್ನು ನಿರ್ನಾಮ ಮಾಡ್ತಾ ಇದ್ದಾರೆ ಭವಿಷ್ಯದಲ್ಲಿ ಗುಲಾಮರನ್ನಾಗಿಸುವ ಹುನ್ನಾರ ಇದು. ಸುಳ್ಳು ವಂಚನೆ ಮೋಸ ಮಾಡಿ ಆದರೂ ಸರಕಾರ ನಡೆಸಬೇಕೇ..?ಹಿಂದುರಾಷ್ಟ್ರದಲ್ಲಿ ಶ್ರೀಮಂತರು ಮತ್ತು ಉನ್ನತ ವರ್ಗದವರು ಮಾತ್ರ ಬದುಕಬೇಕಾ ಇದು ನಮ್ಮ ದಲಿತ ಸಮುದಾಯ ಮತ್ತು ಶೂದ್ರ ಸಮುದಾಯ ಅರ್ಥ ಮಾಡಿಕೊಳ್ಳಬೇಕಾಗಿದೆ.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

3 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

5 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

12 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

18 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago