Advertisement
ಸುದ್ದಿಗಳು

#Deepavali | ಇನ್ನು ಮುಂದೆ ಅಮೇರಿಕಾದಲ್ಲೂ ದೀಪಾವಳಿ ಹಬ್ಬಕ್ಕೆ ರಜೆ | ಶಾಲೆಗಳಿಗೆ ಅಧಿಕೃತ ರಜೆ ಘೋಷಿಸಿದ ನ್ಯೂಯಾರ್ಕ್​ |

Share

ದೀಪಾವಳಿ ಹಬ್ಬ ಅಂದ್ರೆ ನಮ್ಮ ದೇಶದೆಲ್ಲೆಡೆ ಬಹಳ ಸಂಭ್ರಮದಿಂದ ಆಚರಿಸುವ ಹಬ್ಬ. ಇಡೀ ದೇಶಕ್ಕೆ ದೇಶವೇ ಈ ದಿನ ಶಾಲಾ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿ ಹಬ್ಬ ಮಾಡಲಾಗುತ್ತದೆ. ಇದೀಗ ನ್ಯೂಯಾರ್ಕ್​ ನಗರದಲ್ಲಿ ದೀಪಾವಳಿ #Deepavali ಹಬ್ಬಕ್ಕೆ ಶಾಲೆಗಳಿಗೆ ರಜೆ ಘೊಷಿಸುವ ಮೂಲಕ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಈ ಹಿಂದೆ 2021 ಮತ್ತು 2022ರಲ್ಲಿ ಎರಡು ಬಾರಿ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಲಾಗಿತ್ತು. ಎರಡೂ ವಿಫಲವಾಗಿತ್ತು. ಈ ಮಸೂದೆಯನ್ನು ವಿಧಾನಸಭೆಯ ಸದಸ್ಯೆ ಜೆನಿಫರ್ ರಾಜ್‌ಕುಮಾರ್ ಮಂಡಿಸಿ, ಮಸೂದೆ ಅಂಗೀಕಾರವಾದಾಗ ದಕ್ಷಿಣ ಏಷ್ಯಾದ ಸಮುದಾಯದ ಕನಸನ್ನು ನನಸು ಮಾಡಿದೆ ಎಂದು ಹೇಳಿದ್ದರು.

ಹಲವು ವರ್ಷಗಳಿಂದ ನ್ಯೂಯಾರ್ಕ್​ನಲ್ಲಿ ದೀಪಾವಳಿ ಹಬ್ಬಕ್ಕೆ ರಜೆ ಘೊಷಿಸಬೇಕು ಎನ್ನುವ ಒತ್ತಾಯವಿತ್ತು. ವೈಟ್ ಹೌಸ್ ನಲ್ಲೂ ಈ ಹಿಂದೆ ದೀಪಾವಳಿ ಆಚರಿಸಲಾಗಿತ್ತ. ಕತ್ತಲೆ ಮೇಲೆ ಬೆಳಕಿನ ವಿಜಯದ ಸಂಕೇತ ದೀಪಾವಳಿ ಎಂದು ಮೇಯರ್ ಟ್ವೀಟ್ ಮಾಡಿದ್ದಾರೆ. ಕಳೆದ ತಿಂಗಳು ಯುಎಸ್ ಕಾಂಗ್ರೆಸ್ ಮಹಿಳೆ ಗ್ರೇಸ್ ಮೆಂಗ್ ಅವರು ದೀಪಾವಳಿಯನ್ನು ಫೆಡರಲ್ ರಜಾದಿನವೆಂದು ಘೋಷಿಸುವ ಮಸೂದೆಯನ್ನು ಮಂಡಿಸಿದರು. ಒಂದು ವೇಳೆ ಜಾರಿಗೆ ಬಂದರೆ, ದೀಪಾವಳಿ ಅಮೆರಿಕದಲ್ಲಿ 12 ನೇ ಫೆಡರಲ್ ಮಾನ್ಯತೆ ಪಡೆದ ರಜಾದಿನವಾಗುತ್ತದೆ ಎಂದು ವರದಿ ಹೇಳಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

8 minutes ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

9 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

17 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

18 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago