ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭರ್ಜರಿ ಅಲ್ಲದಿದ್ರು ತಕ್ಕ ಮಟ್ಟಿಗೆ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಮಾತ್ರ ಈಗಲೂ ಮಳೆಯ ಪ್ರಮಾಣ ಕಡಿಮೆಯಿದೆ. ಇದೇ ವೇಳೆ ರಾಜ್ಯದಲ್ಲಿ ಶೇಕಡಾ 32ರಷ್ಟು ಮಳೆಯ ಕೊರತೆಯಾಗಿದೆ ಎಂಬ ವರದಿ ಹೊರಬಿದ್ದಿದೆ.
ವರದಿಗಳ ಪ್ರಕಾರ ಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರವರೆಗೆ 27.3 ಸೆಂಟಿ ಮೀಟರ್ ಮಳೆಯಾಗಿದೆ. ಆದರೆ ಈ ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾಗುತ್ತಿದ್ದ ಪ್ರಮಾಣ 35.35 ಸೆಂ.ಮೀ ಆಗಿತ್ತು. ರಾಜ್ಯದಲ್ಲಿ ಅತೀ ಹೆಚ್ಚು ಮಳೆಯ ಕೊರತೆಯಾದ ಜಿಲ್ಲೆಯನ್ನು ಗಮನಿಸುವುದಾರೆ ಕೊಡಗಿನಲ್ಲಿ ಅತೀ ಹೆಚ್ಚು ಮಳೆಯ ಕೊರತೆ ದಾಖಲಾಗಿದೆ. ಇದೇ ವೇಳೆ ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆ ಜಿಲ್ಲೆಗಳಲ್ಲಿ ಇದುವರೆಗೆ ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ.
ಕರ್ನಾಟಕದ 13 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ದಾಖಲಾಗಿದ್ದು, 16 ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರದ ಪುಣೆ, ಪಾಲ್ಘರ್, ಥಾಣೆ ಮತ್ತು ರಾಯಗಡ್ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹೀಗಾಗಿ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…