ದೇಹದಾನಕ್ಕೆ ಹೆಸರು ನೋಂದಾಯಿಸಿದ ಪುತ್ತೂರು ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ

June 19, 2022
11:37 AM

 ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ.

ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ ದೇವಮ್ಮ (58 ವ.) ಸ್ವ ಇಚ್ಛೆಯಿಂದ ಗಂಡ ಹಾಗೂ ಅವರ ಮೂವರು ಮಕ್ಕಳ ಒಪ್ಪಿಗೆಯ ಮೆರೆಗೆ ಡಾ.ಕೆ.ವಿ ಚಿದಾನಂದ ಮಾಲಿಕತ್ವದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ವೀಲ್ ನಾಮೆ ಯಾನೆ ಮರಣ ಶಾಸನವನ್ನು ಮಾಡಿಸಿದ್ದಾರೆ.

ನಿಧನರಾದನಂತರ ಕೆಲವೇ ಗಂಟೆಗಳಲ್ಲಿ ಭಸ್ಮವಾಗುವ ದೇಹದಿಂದ ಏನೂ ಪ್ರಯೋಜನವಿಲ್ಲ ಆದರೆ ವಿದ್ಯಾರ್ಥಿಗಳಿಗಾದರೂ ಉಪಯೋಗ ಆಗಲಿ ಎನ್ನುವ ಒಳ್ಳೆಯ ಚಿಂತನೆಯ ಮೂಲಕ ದೇಹದಾನ ಮಾಡುವುದೆಂದು ಕೆಲವು ವರ್ಷಗಳ ಹಿಂದೆಯೇ ನಿರ್ಧರಿಸಿದೆ. ಆದರೆ ಹೇಗೆ ಮಾಡುವುದೇನ್ನುವ ಮಾಹಿತಿ ಇರಲಿಲ್ಲ . ಇತ್ತಿಚೆಗೆ ಪುತ್ತೂರಿನ ವೈದ್ಯರೊಬ್ಬರು ಕೆವಿಜಿ ಮೆಡಿಕಲ್ ಕಾಲೇಜು ಸಂಪರ್ಕಿಸುವಂತೆ ಹೇಳಿದರಿಂದ ನಾನೇ ಬಂದು ಮಾಹಿತಿ ಸಂಗ್ರಹಿಸಿ, ವೀಲು ನಾಮೆ ಮಾಡಿಸಿ ಕಾಲೇಜಿಗೂ ಕೊಟ್ಟಿದ್ದೇನೆ ಎನ್ನುತ್ತಾರೆ ದೇವಮ್ಮರವರು.

ಮರಣ ಹೊಂದಿದ 5 ಗಂಟೆಯ ಒಳಗಾಗಿ ದೇಹವನ್ನು ಮೆಡಿಕಲ್ ಕಾಲೇಜಿಗೆ ಒಪ್ಪಿಸಬೇಕು ಎನ್ನುವ ನಿಯಮವಿದೆ.

ದೇವಮ್ಮ ಅವರ ಯೋಚನೆ ಬಹಳಷ್ಟು ದೃಡ ನಿರ್ಧರವಾಗಿದ್ದು, ಅದರಿಂದಾಗಿ ನೂರಾರು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror