ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ.
ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ ದೇವಮ್ಮ (58 ವ.) ಸ್ವ ಇಚ್ಛೆಯಿಂದ ಗಂಡ ಹಾಗೂ ಅವರ ಮೂವರು ಮಕ್ಕಳ ಒಪ್ಪಿಗೆಯ ಮೆರೆಗೆ ಡಾ.ಕೆ.ವಿ ಚಿದಾನಂದ ಮಾಲಿಕತ್ವದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ವೀಲ್ ನಾಮೆ ಯಾನೆ ಮರಣ ಶಾಸನವನ್ನು ಮಾಡಿಸಿದ್ದಾರೆ.
ನಿಧನರಾದನಂತರ ಕೆಲವೇ ಗಂಟೆಗಳಲ್ಲಿ ಭಸ್ಮವಾಗುವ ದೇಹದಿಂದ ಏನೂ ಪ್ರಯೋಜನವಿಲ್ಲ ಆದರೆ ವಿದ್ಯಾರ್ಥಿಗಳಿಗಾದರೂ ಉಪಯೋಗ ಆಗಲಿ ಎನ್ನುವ ಒಳ್ಳೆಯ ಚಿಂತನೆಯ ಮೂಲಕ ದೇಹದಾನ ಮಾಡುವುದೆಂದು ಕೆಲವು ವರ್ಷಗಳ ಹಿಂದೆಯೇ ನಿರ್ಧರಿಸಿದೆ. ಆದರೆ ಹೇಗೆ ಮಾಡುವುದೇನ್ನುವ ಮಾಹಿತಿ ಇರಲಿಲ್ಲ . ಇತ್ತಿಚೆಗೆ ಪುತ್ತೂರಿನ ವೈದ್ಯರೊಬ್ಬರು ಕೆವಿಜಿ ಮೆಡಿಕಲ್ ಕಾಲೇಜು ಸಂಪರ್ಕಿಸುವಂತೆ ಹೇಳಿದರಿಂದ ನಾನೇ ಬಂದು ಮಾಹಿತಿ ಸಂಗ್ರಹಿಸಿ, ವೀಲು ನಾಮೆ ಮಾಡಿಸಿ ಕಾಲೇಜಿಗೂ ಕೊಟ್ಟಿದ್ದೇನೆ ಎನ್ನುತ್ತಾರೆ ದೇವಮ್ಮರವರು.
ಮರಣ ಹೊಂದಿದ 5 ಗಂಟೆಯ ಒಳಗಾಗಿ ದೇಹವನ್ನು ಮೆಡಿಕಲ್ ಕಾಲೇಜಿಗೆ ಒಪ್ಪಿಸಬೇಕು ಎನ್ನುವ ನಿಯಮವಿದೆ.
ದೇವಮ್ಮ ಅವರ ಯೋಚನೆ ಬಹಳಷ್ಟು ದೃಡ ನಿರ್ಧರವಾಗಿದ್ದು, ಅದರಿಂದಾಗಿ ನೂರಾರು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ತಿಳಿಸಿದ್ದಾರೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…