ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ.
ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ ದೇವಮ್ಮ (58 ವ.) ಸ್ವ ಇಚ್ಛೆಯಿಂದ ಗಂಡ ಹಾಗೂ ಅವರ ಮೂವರು ಮಕ್ಕಳ ಒಪ್ಪಿಗೆಯ ಮೆರೆಗೆ ಡಾ.ಕೆ.ವಿ ಚಿದಾನಂದ ಮಾಲಿಕತ್ವದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ವೀಲ್ ನಾಮೆ ಯಾನೆ ಮರಣ ಶಾಸನವನ್ನು ಮಾಡಿಸಿದ್ದಾರೆ.
ನಿಧನರಾದನಂತರ ಕೆಲವೇ ಗಂಟೆಗಳಲ್ಲಿ ಭಸ್ಮವಾಗುವ ದೇಹದಿಂದ ಏನೂ ಪ್ರಯೋಜನವಿಲ್ಲ ಆದರೆ ವಿದ್ಯಾರ್ಥಿಗಳಿಗಾದರೂ ಉಪಯೋಗ ಆಗಲಿ ಎನ್ನುವ ಒಳ್ಳೆಯ ಚಿಂತನೆಯ ಮೂಲಕ ದೇಹದಾನ ಮಾಡುವುದೆಂದು ಕೆಲವು ವರ್ಷಗಳ ಹಿಂದೆಯೇ ನಿರ್ಧರಿಸಿದೆ. ಆದರೆ ಹೇಗೆ ಮಾಡುವುದೇನ್ನುವ ಮಾಹಿತಿ ಇರಲಿಲ್ಲ . ಇತ್ತಿಚೆಗೆ ಪುತ್ತೂರಿನ ವೈದ್ಯರೊಬ್ಬರು ಕೆವಿಜಿ ಮೆಡಿಕಲ್ ಕಾಲೇಜು ಸಂಪರ್ಕಿಸುವಂತೆ ಹೇಳಿದರಿಂದ ನಾನೇ ಬಂದು ಮಾಹಿತಿ ಸಂಗ್ರಹಿಸಿ, ವೀಲು ನಾಮೆ ಮಾಡಿಸಿ ಕಾಲೇಜಿಗೂ ಕೊಟ್ಟಿದ್ದೇನೆ ಎನ್ನುತ್ತಾರೆ ದೇವಮ್ಮರವರು.
ಮರಣ ಹೊಂದಿದ 5 ಗಂಟೆಯ ಒಳಗಾಗಿ ದೇಹವನ್ನು ಮೆಡಿಕಲ್ ಕಾಲೇಜಿಗೆ ಒಪ್ಪಿಸಬೇಕು ಎನ್ನುವ ನಿಯಮವಿದೆ.
ದೇವಮ್ಮ ಅವರ ಯೋಚನೆ ಬಹಳಷ್ಟು ದೃಡ ನಿರ್ಧರವಾಗಿದ್ದು, ಅದರಿಂದಾಗಿ ನೂರಾರು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ತಿಳಿಸಿದ್ದಾರೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…