Advertisement
ರಾಜ್ಯ

ದೇಹದಾನಕ್ಕೆ ಹೆಸರು ನೋಂದಾಯಿಸಿದ ಪುತ್ತೂರು ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ

Share

 ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ.

Advertisement

ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ ದೇವಮ್ಮ (58 ವ.) ಸ್ವ ಇಚ್ಛೆಯಿಂದ ಗಂಡ ಹಾಗೂ ಅವರ ಮೂವರು ಮಕ್ಕಳ ಒಪ್ಪಿಗೆಯ ಮೆರೆಗೆ ಡಾ.ಕೆ.ವಿ ಚಿದಾನಂದ ಮಾಲಿಕತ್ವದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ವೀಲ್ ನಾಮೆ ಯಾನೆ ಮರಣ ಶಾಸನವನ್ನು ಮಾಡಿಸಿದ್ದಾರೆ.

ನಿಧನರಾದನಂತರ ಕೆಲವೇ ಗಂಟೆಗಳಲ್ಲಿ ಭಸ್ಮವಾಗುವ ದೇಹದಿಂದ ಏನೂ ಪ್ರಯೋಜನವಿಲ್ಲ ಆದರೆ ವಿದ್ಯಾರ್ಥಿಗಳಿಗಾದರೂ ಉಪಯೋಗ ಆಗಲಿ ಎನ್ನುವ ಒಳ್ಳೆಯ ಚಿಂತನೆಯ ಮೂಲಕ ದೇಹದಾನ ಮಾಡುವುದೆಂದು ಕೆಲವು ವರ್ಷಗಳ ಹಿಂದೆಯೇ ನಿರ್ಧರಿಸಿದೆ. ಆದರೆ ಹೇಗೆ ಮಾಡುವುದೇನ್ನುವ ಮಾಹಿತಿ ಇರಲಿಲ್ಲ . ಇತ್ತಿಚೆಗೆ ಪುತ್ತೂರಿನ ವೈದ್ಯರೊಬ್ಬರು ಕೆವಿಜಿ ಮೆಡಿಕಲ್ ಕಾಲೇಜು ಸಂಪರ್ಕಿಸುವಂತೆ ಹೇಳಿದರಿಂದ ನಾನೇ ಬಂದು ಮಾಹಿತಿ ಸಂಗ್ರಹಿಸಿ, ವೀಲು ನಾಮೆ ಮಾಡಿಸಿ ಕಾಲೇಜಿಗೂ ಕೊಟ್ಟಿದ್ದೇನೆ ಎನ್ನುತ್ತಾರೆ ದೇವಮ್ಮರವರು.

ಮರಣ ಹೊಂದಿದ 5 ಗಂಟೆಯ ಒಳಗಾಗಿ ದೇಹವನ್ನು ಮೆಡಿಕಲ್ ಕಾಲೇಜಿಗೆ ಒಪ್ಪಿಸಬೇಕು ಎನ್ನುವ ನಿಯಮವಿದೆ.

ದೇವಮ್ಮ ಅವರ ಯೋಚನೆ ಬಹಳಷ್ಟು ದೃಡ ನಿರ್ಧರವಾಗಿದ್ದು, ಅದರಿಂದಾಗಿ ನೂರಾರು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

13 hours ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

20 hours ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

20 hours ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

20 hours ago

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…

20 hours ago

ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ  (Artificial Intelligence) AI)ಮೂಲಕ…

20 hours ago