ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ.
ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ ದೇವಮ್ಮ (58 ವ.) ಸ್ವ ಇಚ್ಛೆಯಿಂದ ಗಂಡ ಹಾಗೂ ಅವರ ಮೂವರು ಮಕ್ಕಳ ಒಪ್ಪಿಗೆಯ ಮೆರೆಗೆ ಡಾ.ಕೆ.ವಿ ಚಿದಾನಂದ ಮಾಲಿಕತ್ವದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ವೀಲ್ ನಾಮೆ ಯಾನೆ ಮರಣ ಶಾಸನವನ್ನು ಮಾಡಿಸಿದ್ದಾರೆ.
ನಿಧನರಾದನಂತರ ಕೆಲವೇ ಗಂಟೆಗಳಲ್ಲಿ ಭಸ್ಮವಾಗುವ ದೇಹದಿಂದ ಏನೂ ಪ್ರಯೋಜನವಿಲ್ಲ ಆದರೆ ವಿದ್ಯಾರ್ಥಿಗಳಿಗಾದರೂ ಉಪಯೋಗ ಆಗಲಿ ಎನ್ನುವ ಒಳ್ಳೆಯ ಚಿಂತನೆಯ ಮೂಲಕ ದೇಹದಾನ ಮಾಡುವುದೆಂದು ಕೆಲವು ವರ್ಷಗಳ ಹಿಂದೆಯೇ ನಿರ್ಧರಿಸಿದೆ. ಆದರೆ ಹೇಗೆ ಮಾಡುವುದೇನ್ನುವ ಮಾಹಿತಿ ಇರಲಿಲ್ಲ . ಇತ್ತಿಚೆಗೆ ಪುತ್ತೂರಿನ ವೈದ್ಯರೊಬ್ಬರು ಕೆವಿಜಿ ಮೆಡಿಕಲ್ ಕಾಲೇಜು ಸಂಪರ್ಕಿಸುವಂತೆ ಹೇಳಿದರಿಂದ ನಾನೇ ಬಂದು ಮಾಹಿತಿ ಸಂಗ್ರಹಿಸಿ, ವೀಲು ನಾಮೆ ಮಾಡಿಸಿ ಕಾಲೇಜಿಗೂ ಕೊಟ್ಟಿದ್ದೇನೆ ಎನ್ನುತ್ತಾರೆ ದೇವಮ್ಮರವರು.
ಮರಣ ಹೊಂದಿದ 5 ಗಂಟೆಯ ಒಳಗಾಗಿ ದೇಹವನ್ನು ಮೆಡಿಕಲ್ ಕಾಲೇಜಿಗೆ ಒಪ್ಪಿಸಬೇಕು ಎನ್ನುವ ನಿಯಮವಿದೆ.
ದೇವಮ್ಮ ಅವರ ಯೋಚನೆ ಬಹಳಷ್ಟು ದೃಡ ನಿರ್ಧರವಾಗಿದ್ದು, ಅದರಿಂದಾಗಿ ನೂರಾರು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.