ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ.
ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ ದೇವಮ್ಮ (58 ವ.) ಸ್ವ ಇಚ್ಛೆಯಿಂದ ಗಂಡ ಹಾಗೂ ಅವರ ಮೂವರು ಮಕ್ಕಳ ಒಪ್ಪಿಗೆಯ ಮೆರೆಗೆ ಡಾ.ಕೆ.ವಿ ಚಿದಾನಂದ ಮಾಲಿಕತ್ವದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ವೀಲ್ ನಾಮೆ ಯಾನೆ ಮರಣ ಶಾಸನವನ್ನು ಮಾಡಿಸಿದ್ದಾರೆ.
ನಿಧನರಾದನಂತರ ಕೆಲವೇ ಗಂಟೆಗಳಲ್ಲಿ ಭಸ್ಮವಾಗುವ ದೇಹದಿಂದ ಏನೂ ಪ್ರಯೋಜನವಿಲ್ಲ ಆದರೆ ವಿದ್ಯಾರ್ಥಿಗಳಿಗಾದರೂ ಉಪಯೋಗ ಆಗಲಿ ಎನ್ನುವ ಒಳ್ಳೆಯ ಚಿಂತನೆಯ ಮೂಲಕ ದೇಹದಾನ ಮಾಡುವುದೆಂದು ಕೆಲವು ವರ್ಷಗಳ ಹಿಂದೆಯೇ ನಿರ್ಧರಿಸಿದೆ. ಆದರೆ ಹೇಗೆ ಮಾಡುವುದೇನ್ನುವ ಮಾಹಿತಿ ಇರಲಿಲ್ಲ . ಇತ್ತಿಚೆಗೆ ಪುತ್ತೂರಿನ ವೈದ್ಯರೊಬ್ಬರು ಕೆವಿಜಿ ಮೆಡಿಕಲ್ ಕಾಲೇಜು ಸಂಪರ್ಕಿಸುವಂತೆ ಹೇಳಿದರಿಂದ ನಾನೇ ಬಂದು ಮಾಹಿತಿ ಸಂಗ್ರಹಿಸಿ, ವೀಲು ನಾಮೆ ಮಾಡಿಸಿ ಕಾಲೇಜಿಗೂ ಕೊಟ್ಟಿದ್ದೇನೆ ಎನ್ನುತ್ತಾರೆ ದೇವಮ್ಮರವರು.
ಮರಣ ಹೊಂದಿದ 5 ಗಂಟೆಯ ಒಳಗಾಗಿ ದೇಹವನ್ನು ಮೆಡಿಕಲ್ ಕಾಲೇಜಿಗೆ ಒಪ್ಪಿಸಬೇಕು ಎನ್ನುವ ನಿಯಮವಿದೆ.
ದೇವಮ್ಮ ಅವರ ಯೋಚನೆ ಬಹಳಷ್ಟು ದೃಡ ನಿರ್ಧರವಾಗಿದ್ದು, ಅದರಿಂದಾಗಿ ನೂರಾರು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ತಿಳಿಸಿದ್ದಾರೆ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…