ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ.
ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ ದೇವಮ್ಮ (58 ವ.) ಸ್ವ ಇಚ್ಛೆಯಿಂದ ಗಂಡ ಹಾಗೂ ಅವರ ಮೂವರು ಮಕ್ಕಳ ಒಪ್ಪಿಗೆಯ ಮೆರೆಗೆ ಡಾ.ಕೆ.ವಿ ಚಿದಾನಂದ ಮಾಲಿಕತ್ವದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ವೀಲ್ ನಾಮೆ ಯಾನೆ ಮರಣ ಶಾಸನವನ್ನು ಮಾಡಿಸಿದ್ದಾರೆ.
ನಿಧನರಾದನಂತರ ಕೆಲವೇ ಗಂಟೆಗಳಲ್ಲಿ ಭಸ್ಮವಾಗುವ ದೇಹದಿಂದ ಏನೂ ಪ್ರಯೋಜನವಿಲ್ಲ ಆದರೆ ವಿದ್ಯಾರ್ಥಿಗಳಿಗಾದರೂ ಉಪಯೋಗ ಆಗಲಿ ಎನ್ನುವ ಒಳ್ಳೆಯ ಚಿಂತನೆಯ ಮೂಲಕ ದೇಹದಾನ ಮಾಡುವುದೆಂದು ಕೆಲವು ವರ್ಷಗಳ ಹಿಂದೆಯೇ ನಿರ್ಧರಿಸಿದೆ. ಆದರೆ ಹೇಗೆ ಮಾಡುವುದೇನ್ನುವ ಮಾಹಿತಿ ಇರಲಿಲ್ಲ . ಇತ್ತಿಚೆಗೆ ಪುತ್ತೂರಿನ ವೈದ್ಯರೊಬ್ಬರು ಕೆವಿಜಿ ಮೆಡಿಕಲ್ ಕಾಲೇಜು ಸಂಪರ್ಕಿಸುವಂತೆ ಹೇಳಿದರಿಂದ ನಾನೇ ಬಂದು ಮಾಹಿತಿ ಸಂಗ್ರಹಿಸಿ, ವೀಲು ನಾಮೆ ಮಾಡಿಸಿ ಕಾಲೇಜಿಗೂ ಕೊಟ್ಟಿದ್ದೇನೆ ಎನ್ನುತ್ತಾರೆ ದೇವಮ್ಮರವರು.
ಮರಣ ಹೊಂದಿದ 5 ಗಂಟೆಯ ಒಳಗಾಗಿ ದೇಹವನ್ನು ಮೆಡಿಕಲ್ ಕಾಲೇಜಿಗೆ ಒಪ್ಪಿಸಬೇಕು ಎನ್ನುವ ನಿಯಮವಿದೆ.
ದೇವಮ್ಮ ಅವರ ಯೋಚನೆ ಬಹಳಷ್ಟು ದೃಡ ನಿರ್ಧರವಾಗಿದ್ದು, ಅದರಿಂದಾಗಿ ನೂರಾರು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ತಿಳಿಸಿದ್ದಾರೆ.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…