ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ.
ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ ದೇವಮ್ಮ (58 ವ.) ಸ್ವ ಇಚ್ಛೆಯಿಂದ ಗಂಡ ಹಾಗೂ ಅವರ ಮೂವರು ಮಕ್ಕಳ ಒಪ್ಪಿಗೆಯ ಮೆರೆಗೆ ಡಾ.ಕೆ.ವಿ ಚಿದಾನಂದ ಮಾಲಿಕತ್ವದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ವೀಲ್ ನಾಮೆ ಯಾನೆ ಮರಣ ಶಾಸನವನ್ನು ಮಾಡಿಸಿದ್ದಾರೆ.
ನಿಧನರಾದನಂತರ ಕೆಲವೇ ಗಂಟೆಗಳಲ್ಲಿ ಭಸ್ಮವಾಗುವ ದೇಹದಿಂದ ಏನೂ ಪ್ರಯೋಜನವಿಲ್ಲ ಆದರೆ ವಿದ್ಯಾರ್ಥಿಗಳಿಗಾದರೂ ಉಪಯೋಗ ಆಗಲಿ ಎನ್ನುವ ಒಳ್ಳೆಯ ಚಿಂತನೆಯ ಮೂಲಕ ದೇಹದಾನ ಮಾಡುವುದೆಂದು ಕೆಲವು ವರ್ಷಗಳ ಹಿಂದೆಯೇ ನಿರ್ಧರಿಸಿದೆ. ಆದರೆ ಹೇಗೆ ಮಾಡುವುದೇನ್ನುವ ಮಾಹಿತಿ ಇರಲಿಲ್ಲ . ಇತ್ತಿಚೆಗೆ ಪುತ್ತೂರಿನ ವೈದ್ಯರೊಬ್ಬರು ಕೆವಿಜಿ ಮೆಡಿಕಲ್ ಕಾಲೇಜು ಸಂಪರ್ಕಿಸುವಂತೆ ಹೇಳಿದರಿಂದ ನಾನೇ ಬಂದು ಮಾಹಿತಿ ಸಂಗ್ರಹಿಸಿ, ವೀಲು ನಾಮೆ ಮಾಡಿಸಿ ಕಾಲೇಜಿಗೂ ಕೊಟ್ಟಿದ್ದೇನೆ ಎನ್ನುತ್ತಾರೆ ದೇವಮ್ಮರವರು.
ಮರಣ ಹೊಂದಿದ 5 ಗಂಟೆಯ ಒಳಗಾಗಿ ದೇಹವನ್ನು ಮೆಡಿಕಲ್ ಕಾಲೇಜಿಗೆ ಒಪ್ಪಿಸಬೇಕು ಎನ್ನುವ ನಿಯಮವಿದೆ.
ದೇವಮ್ಮ ಅವರ ಯೋಚನೆ ಬಹಳಷ್ಟು ದೃಡ ನಿರ್ಧರವಾಗಿದ್ದು, ಅದರಿಂದಾಗಿ ನೂರಾರು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…