ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ.
ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ ದೇವಮ್ಮ (58 ವ.) ಸ್ವ ಇಚ್ಛೆಯಿಂದ ಗಂಡ ಹಾಗೂ ಅವರ ಮೂವರು ಮಕ್ಕಳ ಒಪ್ಪಿಗೆಯ ಮೆರೆಗೆ ಡಾ.ಕೆ.ವಿ ಚಿದಾನಂದ ಮಾಲಿಕತ್ವದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ವೀಲ್ ನಾಮೆ ಯಾನೆ ಮರಣ ಶಾಸನವನ್ನು ಮಾಡಿಸಿದ್ದಾರೆ.
ನಿಧನರಾದನಂತರ ಕೆಲವೇ ಗಂಟೆಗಳಲ್ಲಿ ಭಸ್ಮವಾಗುವ ದೇಹದಿಂದ ಏನೂ ಪ್ರಯೋಜನವಿಲ್ಲ ಆದರೆ ವಿದ್ಯಾರ್ಥಿಗಳಿಗಾದರೂ ಉಪಯೋಗ ಆಗಲಿ ಎನ್ನುವ ಒಳ್ಳೆಯ ಚಿಂತನೆಯ ಮೂಲಕ ದೇಹದಾನ ಮಾಡುವುದೆಂದು ಕೆಲವು ವರ್ಷಗಳ ಹಿಂದೆಯೇ ನಿರ್ಧರಿಸಿದೆ. ಆದರೆ ಹೇಗೆ ಮಾಡುವುದೇನ್ನುವ ಮಾಹಿತಿ ಇರಲಿಲ್ಲ . ಇತ್ತಿಚೆಗೆ ಪುತ್ತೂರಿನ ವೈದ್ಯರೊಬ್ಬರು ಕೆವಿಜಿ ಮೆಡಿಕಲ್ ಕಾಲೇಜು ಸಂಪರ್ಕಿಸುವಂತೆ ಹೇಳಿದರಿಂದ ನಾನೇ ಬಂದು ಮಾಹಿತಿ ಸಂಗ್ರಹಿಸಿ, ವೀಲು ನಾಮೆ ಮಾಡಿಸಿ ಕಾಲೇಜಿಗೂ ಕೊಟ್ಟಿದ್ದೇನೆ ಎನ್ನುತ್ತಾರೆ ದೇವಮ್ಮರವರು.
ಮರಣ ಹೊಂದಿದ 5 ಗಂಟೆಯ ಒಳಗಾಗಿ ದೇಹವನ್ನು ಮೆಡಿಕಲ್ ಕಾಲೇಜಿಗೆ ಒಪ್ಪಿಸಬೇಕು ಎನ್ನುವ ನಿಯಮವಿದೆ.
ದೇವಮ್ಮ ಅವರ ಯೋಚನೆ ಬಹಳಷ್ಟು ದೃಡ ನಿರ್ಧರವಾಗಿದ್ದು, ಅದರಿಂದಾಗಿ ನೂರಾರು ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ವೈದ್ಯರಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ತಿಳಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…