Advertisement
ಸುದ್ದಿಗಳು

#PMFBY | ಬೆಳೆ ವಿಮೆ ಪ್ರೀಮಿಯಂ ಪಾವತಿ | ಅಧಿಕಾರಿಗಳ ಬೇಜವಾಬ್ದಾರಿ | ರೈತರಿಗೆ ನಷ್ಟದ ಆರೋಪ |

Share

ಈ ಬಾರಿ ಬೆಳೆವಿಮೆ ಪ್ರೀಮಿಯಂ ಪಾವತಿಗೆ ತಡವಾಗಿ ಸೂಚನೆಯಾಗಿದೆ. ಜೂನ್.‌30 ರ ಒಳಗೆ ಪ್ರೀಮಿಯಂ ಪಾವತಿಯಾಗಬೇಕು. ಆದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನಪ್ರತಿನಿಧಿ, ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ಈ ವರ್ಷ ಜೂನ್ ಮುಗಿಯುತ್ತಾ ಬಂದರೂ ವಿಮೆ ಪ್ರೀಮಿಯಂ ಕಟ್ಟಲು ಟರ್ಮ್ ಶೀಟ್ ಸಿದ್ದವಾಗದೆ ಈ ವರ್ಷದ ಬೆಳೆ ವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆಲವು ಪ್ರಯೋಜನಗಳಿಂದ ರೈತರು ವಂಚಿತರಾಗಲಿದ್ದಾರೆ.

ಕಳೆದ ಹಲವು ವರ್ಷಗಳಿಂದ ಮಳೆ ಮತ್ತು ಹವಾಮಾನ ವೈಪರೀತ್ಯ ಬಗ್ಗೆ ಸರ್ಕಾರ ಮತ್ತು ರೈತರಿಗೆ ಸರಿಯಾದ ಮಾಹಿತಿ ಮತ್ತು ತಿರುಚಿದ ಮಾಹಿತಿ ನೀಡಿ ವಿಮಾ ಕಂಪನಿಗಳೊಂದಿಗೆ ಸೇರಿಕೊಂಡು ರೈತ ಸಮೂಹಕ್ಕೆ ವಿಮಾ ಹಣ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಗಳು ಕೂಡಾ ಕೇಳಿ ಬಂದಿತ್ತು. ಹೀಗಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ವಿಮಾ ಸಂಸ್ಥೆಗಳು ಬೆಳೆ ವಿಮಾ ಪರಿಹಾರಕ್ಕೆ ಹವಾಮಾನ ಇಲಾಖೆ ನೀಡುವ ಮಳೆ ಮಾಪನವನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಳವಡಿಸಿರುವ ಮಳೆ ಮಾಪನಗಳು ಮಲೆನಾಡಿನ ಬಹುತೇಕ ಕಡೆ ಕೆಟ್ಟು ನಿಂತು ವರ್ಷಗಳು ಕಳೆದರೂ ದುರಸ್ತಿ ಮಾಡದೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸಾವಿರಾರು ರೂಪಾಯಿ ಹಣ ಪಾವತಿಸಿದ ರೈತರಿಗೆ ಸಮರ್ಪಕವಾಗಿ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿತ್ತು.‌ ಈ ಬಗ್ಗೆ ಕೊಪ್ಪ ಮೊದಲಾದ ಕಡೆಯ ಅಡಿಕೆ ಬೆಳೆಗಾರರ ಒಕ್ಕೂಟ ಶಾಸಕ ಹಾಗೂ ಸಚಿವರ ಗಮನಕ್ಕೆ ತಂದಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago