ಈ ಬಾರಿ ಬೆಳೆವಿಮೆ ಪ್ರೀಮಿಯಂ ಪಾವತಿಗೆ ತಡವಾಗಿ ಸೂಚನೆಯಾಗಿದೆ. ಜೂನ್.30 ರ ಒಳಗೆ ಪ್ರೀಮಿಯಂ ಪಾವತಿಯಾಗಬೇಕು. ಆದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನಪ್ರತಿನಿಧಿ, ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ಈ ವರ್ಷ ಜೂನ್ ಮುಗಿಯುತ್ತಾ ಬಂದರೂ ವಿಮೆ ಪ್ರೀಮಿಯಂ ಕಟ್ಟಲು ಟರ್ಮ್ ಶೀಟ್ ಸಿದ್ದವಾಗದೆ ಈ ವರ್ಷದ ಬೆಳೆ ವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆಲವು ಪ್ರಯೋಜನಗಳಿಂದ ರೈತರು ವಂಚಿತರಾಗಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಳೆ ಮತ್ತು ಹವಾಮಾನ ವೈಪರೀತ್ಯ ಬಗ್ಗೆ ಸರ್ಕಾರ ಮತ್ತು ರೈತರಿಗೆ ಸರಿಯಾದ ಮಾಹಿತಿ ಮತ್ತು ತಿರುಚಿದ ಮಾಹಿತಿ ನೀಡಿ ವಿಮಾ ಕಂಪನಿಗಳೊಂದಿಗೆ ಸೇರಿಕೊಂಡು ರೈತ ಸಮೂಹಕ್ಕೆ ವಿಮಾ ಹಣ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಗಳು ಕೂಡಾ ಕೇಳಿ ಬಂದಿತ್ತು. ಹೀಗಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ವಿಮಾ ಸಂಸ್ಥೆಗಳು ಬೆಳೆ ವಿಮಾ ಪರಿಹಾರಕ್ಕೆ ಹವಾಮಾನ ಇಲಾಖೆ ನೀಡುವ ಮಳೆ ಮಾಪನವನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಳವಡಿಸಿರುವ ಮಳೆ ಮಾಪನಗಳು ಮಲೆನಾಡಿನ ಬಹುತೇಕ ಕಡೆ ಕೆಟ್ಟು ನಿಂತು ವರ್ಷಗಳು ಕಳೆದರೂ ದುರಸ್ತಿ ಮಾಡದೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸಾವಿರಾರು ರೂಪಾಯಿ ಹಣ ಪಾವತಿಸಿದ ರೈತರಿಗೆ ಸಮರ್ಪಕವಾಗಿ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿತ್ತು. ಈ ಬಗ್ಗೆ ಕೊಪ್ಪ ಮೊದಲಾದ ಕಡೆಯ ಅಡಿಕೆ ಬೆಳೆಗಾರರ ಒಕ್ಕೂಟ ಶಾಸಕ ಹಾಗೂ ಸಚಿವರ ಗಮನಕ್ಕೆ ತಂದಿತ್ತು.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…