ಈ ಬಾರಿ ಬೆಳೆವಿಮೆ ಪ್ರೀಮಿಯಂ ಪಾವತಿಗೆ ತಡವಾಗಿ ಸೂಚನೆಯಾಗಿದೆ. ಜೂನ್.30 ರ ಒಳಗೆ ಪ್ರೀಮಿಯಂ ಪಾವತಿಯಾಗಬೇಕು. ಆದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನಪ್ರತಿನಿಧಿ, ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ಈ ವರ್ಷ ಜೂನ್ ಮುಗಿಯುತ್ತಾ ಬಂದರೂ ವಿಮೆ ಪ್ರೀಮಿಯಂ ಕಟ್ಟಲು ಟರ್ಮ್ ಶೀಟ್ ಸಿದ್ದವಾಗದೆ ಈ ವರ್ಷದ ಬೆಳೆ ವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆಲವು ಪ್ರಯೋಜನಗಳಿಂದ ರೈತರು ವಂಚಿತರಾಗಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಳೆ ಮತ್ತು ಹವಾಮಾನ ವೈಪರೀತ್ಯ ಬಗ್ಗೆ ಸರ್ಕಾರ ಮತ್ತು ರೈತರಿಗೆ ಸರಿಯಾದ ಮಾಹಿತಿ ಮತ್ತು ತಿರುಚಿದ ಮಾಹಿತಿ ನೀಡಿ ವಿಮಾ ಕಂಪನಿಗಳೊಂದಿಗೆ ಸೇರಿಕೊಂಡು ರೈತ ಸಮೂಹಕ್ಕೆ ವಿಮಾ ಹಣ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಗಳು ಕೂಡಾ ಕೇಳಿ ಬಂದಿತ್ತು. ಹೀಗಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ವಿಮಾ ಸಂಸ್ಥೆಗಳು ಬೆಳೆ ವಿಮಾ ಪರಿಹಾರಕ್ಕೆ ಹವಾಮಾನ ಇಲಾಖೆ ನೀಡುವ ಮಳೆ ಮಾಪನವನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಳವಡಿಸಿರುವ ಮಳೆ ಮಾಪನಗಳು ಮಲೆನಾಡಿನ ಬಹುತೇಕ ಕಡೆ ಕೆಟ್ಟು ನಿಂತು ವರ್ಷಗಳು ಕಳೆದರೂ ದುರಸ್ತಿ ಮಾಡದೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸಾವಿರಾರು ರೂಪಾಯಿ ಹಣ ಪಾವತಿಸಿದ ರೈತರಿಗೆ ಸಮರ್ಪಕವಾಗಿ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿತ್ತು. ಈ ಬಗ್ಗೆ ಕೊಪ್ಪ ಮೊದಲಾದ ಕಡೆಯ ಅಡಿಕೆ ಬೆಳೆಗಾರರ ಒಕ್ಕೂಟ ಶಾಸಕ ಹಾಗೂ ಸಚಿವರ ಗಮನಕ್ಕೆ ತಂದಿತ್ತು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…