ಈ ಬಾರಿ ಬೆಳೆವಿಮೆ ಪ್ರೀಮಿಯಂ ಪಾವತಿಗೆ ತಡವಾಗಿ ಸೂಚನೆಯಾಗಿದೆ. ಜೂನ್.30 ರ ಒಳಗೆ ಪ್ರೀಮಿಯಂ ಪಾವತಿಯಾಗಬೇಕು. ಆದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನಪ್ರತಿನಿಧಿ, ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ಈ ವರ್ಷ ಜೂನ್ ಮುಗಿಯುತ್ತಾ ಬಂದರೂ ವಿಮೆ ಪ್ರೀಮಿಯಂ ಕಟ್ಟಲು ಟರ್ಮ್ ಶೀಟ್ ಸಿದ್ದವಾಗದೆ ಈ ವರ್ಷದ ಬೆಳೆ ವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆಲವು ಪ್ರಯೋಜನಗಳಿಂದ ರೈತರು ವಂಚಿತರಾಗಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಳೆ ಮತ್ತು ಹವಾಮಾನ ವೈಪರೀತ್ಯ ಬಗ್ಗೆ ಸರ್ಕಾರ ಮತ್ತು ರೈತರಿಗೆ ಸರಿಯಾದ ಮಾಹಿತಿ ಮತ್ತು ತಿರುಚಿದ ಮಾಹಿತಿ ನೀಡಿ ವಿಮಾ ಕಂಪನಿಗಳೊಂದಿಗೆ ಸೇರಿಕೊಂಡು ರೈತ ಸಮೂಹಕ್ಕೆ ವಿಮಾ ಹಣ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಗಳು ಕೂಡಾ ಕೇಳಿ ಬಂದಿತ್ತು. ಹೀಗಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ವಿಮಾ ಸಂಸ್ಥೆಗಳು ಬೆಳೆ ವಿಮಾ ಪರಿಹಾರಕ್ಕೆ ಹವಾಮಾನ ಇಲಾಖೆ ನೀಡುವ ಮಳೆ ಮಾಪನವನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಳವಡಿಸಿರುವ ಮಳೆ ಮಾಪನಗಳು ಮಲೆನಾಡಿನ ಬಹುತೇಕ ಕಡೆ ಕೆಟ್ಟು ನಿಂತು ವರ್ಷಗಳು ಕಳೆದರೂ ದುರಸ್ತಿ ಮಾಡದೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸಾವಿರಾರು ರೂಪಾಯಿ ಹಣ ಪಾವತಿಸಿದ ರೈತರಿಗೆ ಸಮರ್ಪಕವಾಗಿ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿತ್ತು. ಈ ಬಗ್ಗೆ ಕೊಪ್ಪ ಮೊದಲಾದ ಕಡೆಯ ಅಡಿಕೆ ಬೆಳೆಗಾರರ ಒಕ್ಕೂಟ ಶಾಸಕ ಹಾಗೂ ಸಚಿವರ ಗಮನಕ್ಕೆ ತಂದಿತ್ತು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…