ಈ ಬಾರಿ ಬೆಳೆವಿಮೆ ಪ್ರೀಮಿಯಂ ಪಾವತಿಗೆ ತಡವಾಗಿ ಸೂಚನೆಯಾಗಿದೆ. ಜೂನ್.30 ರ ಒಳಗೆ ಪ್ರೀಮಿಯಂ ಪಾವತಿಯಾಗಬೇಕು. ಆದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನಪ್ರತಿನಿಧಿ, ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ಈ ವರ್ಷ ಜೂನ್ ಮುಗಿಯುತ್ತಾ ಬಂದರೂ ವಿಮೆ ಪ್ರೀಮಿಯಂ ಕಟ್ಟಲು ಟರ್ಮ್ ಶೀಟ್ ಸಿದ್ದವಾಗದೆ ಈ ವರ್ಷದ ಬೆಳೆ ವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆಲವು ಪ್ರಯೋಜನಗಳಿಂದ ರೈತರು ವಂಚಿತರಾಗಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಳೆ ಮತ್ತು ಹವಾಮಾನ ವೈಪರೀತ್ಯ ಬಗ್ಗೆ ಸರ್ಕಾರ ಮತ್ತು ರೈತರಿಗೆ ಸರಿಯಾದ ಮಾಹಿತಿ ಮತ್ತು ತಿರುಚಿದ ಮಾಹಿತಿ ನೀಡಿ ವಿಮಾ ಕಂಪನಿಗಳೊಂದಿಗೆ ಸೇರಿಕೊಂಡು ರೈತ ಸಮೂಹಕ್ಕೆ ವಿಮಾ ಹಣ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಗಳು ಕೂಡಾ ಕೇಳಿ ಬಂದಿತ್ತು. ಹೀಗಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ವಿಮಾ ಸಂಸ್ಥೆಗಳು ಬೆಳೆ ವಿಮಾ ಪರಿಹಾರಕ್ಕೆ ಹವಾಮಾನ ಇಲಾಖೆ ನೀಡುವ ಮಳೆ ಮಾಪನವನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಳವಡಿಸಿರುವ ಮಳೆ ಮಾಪನಗಳು ಮಲೆನಾಡಿನ ಬಹುತೇಕ ಕಡೆ ಕೆಟ್ಟು ನಿಂತು ವರ್ಷಗಳು ಕಳೆದರೂ ದುರಸ್ತಿ ಮಾಡದೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸಾವಿರಾರು ರೂಪಾಯಿ ಹಣ ಪಾವತಿಸಿದ ರೈತರಿಗೆ ಸಮರ್ಪಕವಾಗಿ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿತ್ತು. ಈ ಬಗ್ಗೆ ಕೊಪ್ಪ ಮೊದಲಾದ ಕಡೆಯ ಅಡಿಕೆ ಬೆಳೆಗಾರರ ಒಕ್ಕೂಟ ಶಾಸಕ ಹಾಗೂ ಸಚಿವರ ಗಮನಕ್ಕೆ ತಂದಿತ್ತು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…