ಈ ಬಾರಿ ಬೆಳೆವಿಮೆ ಪ್ರೀಮಿಯಂ ಪಾವತಿಗೆ ತಡವಾಗಿ ಸೂಚನೆಯಾಗಿದೆ. ಜೂನ್.30 ರ ಒಳಗೆ ಪ್ರೀಮಿಯಂ ಪಾವತಿಯಾಗಬೇಕು. ಆದರೆ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಜನಪ್ರತಿನಿಧಿ, ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ಈ ವರ್ಷ ಜೂನ್ ಮುಗಿಯುತ್ತಾ ಬಂದರೂ ವಿಮೆ ಪ್ರೀಮಿಯಂ ಕಟ್ಟಲು ಟರ್ಮ್ ಶೀಟ್ ಸಿದ್ದವಾಗದೆ ಈ ವರ್ಷದ ಬೆಳೆ ವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆಲವು ಪ್ರಯೋಜನಗಳಿಂದ ರೈತರು ವಂಚಿತರಾಗಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಳೆ ಮತ್ತು ಹವಾಮಾನ ವೈಪರೀತ್ಯ ಬಗ್ಗೆ ಸರ್ಕಾರ ಮತ್ತು ರೈತರಿಗೆ ಸರಿಯಾದ ಮಾಹಿತಿ ಮತ್ತು ತಿರುಚಿದ ಮಾಹಿತಿ ನೀಡಿ ವಿಮಾ ಕಂಪನಿಗಳೊಂದಿಗೆ ಸೇರಿಕೊಂಡು ರೈತ ಸಮೂಹಕ್ಕೆ ವಿಮಾ ಹಣ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಗಳು ಕೂಡಾ ಕೇಳಿ ಬಂದಿತ್ತು. ಹೀಗಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಹೆಚ್ಚುವರಿ ಕಾರ್ಯದರ್ಶಿ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ವಿಮಾ ಸಂಸ್ಥೆಗಳು ಬೆಳೆ ವಿಮಾ ಪರಿಹಾರಕ್ಕೆ ಹವಾಮಾನ ಇಲಾಖೆ ನೀಡುವ ಮಳೆ ಮಾಪನವನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಳವಡಿಸಿರುವ ಮಳೆ ಮಾಪನಗಳು ಮಲೆನಾಡಿನ ಬಹುತೇಕ ಕಡೆ ಕೆಟ್ಟು ನಿಂತು ವರ್ಷಗಳು ಕಳೆದರೂ ದುರಸ್ತಿ ಮಾಡದೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಸಾವಿರಾರು ರೂಪಾಯಿ ಹಣ ಪಾವತಿಸಿದ ರೈತರಿಗೆ ಸಮರ್ಪಕವಾಗಿ ವಿಮಾ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿತ್ತು. ಈ ಬಗ್ಗೆ ಕೊಪ್ಪ ಮೊದಲಾದ ಕಡೆಯ ಅಡಿಕೆ ಬೆಳೆಗಾರರ ಒಕ್ಕೂಟ ಶಾಸಕ ಹಾಗೂ ಸಚಿವರ ಗಮನಕ್ಕೆ ತಂದಿತ್ತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…