Advertisement
ಸುದ್ದಿಗಳು

ಅಡಿಕೆ ಹಾನಿಕಾರಕ ಎಂದ ಸಂಸದರ ಭೇಟಿ | ವಾಸ್ತವ ಮನವರಿಕೆ ಮಾಡಿದ ಅಡಿಕೆ ಬೆಳೆಗಾರರ ನಿಯೋಗ | ಹಳದಿ ಎಲೆರೋಗ ಸಂಶೋಧನೆಗೂ ಆದ್ಯತೆ |

Share

ಅಡಿಕೆ ಹಾನಿಕಾರಕ ಹೀಗಾಗಿ ಅಡಿಕೆ ನಿಷೇಧ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದ ಜಾರ್ಖಂಡ್‌ ಸಂಸದ ನಿಶಿಕಾಂತ್‌ ದುಬೆ ಅವರನ್ನು ಭೇಟಿಯಾದ ಅಡಿಕೆ ಬೆಳೆಗಾರರ ನಿಯೋಗವು ಅಡಿಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಔಷಧೀಯ ಗುಣಗಳು ಇವೆ ಎಂದು ಮನವರಿಕೆ ಮಾಡಿದ್ದಾರೆ.

ಅಡಿಕೆ ಬೆಳೆಗಾರರ ನಿಯೋಗವು ಎರಡು ದಿನಗಳಿಂದ ದೆಹಲಿಯಲ್ಲಿ ಅಡಿಕೆ ಬೆಳೆಗಾರರ ಹಿತಕಾಯುವ ವಿವಿಧ ಅಂಶಗಳ ಬಗ್ಗೆ ಸಂಸದರು ಹಾಗೂ ಸಚಿವರನ್ನು ಭೇಟಿ ಮಾಡಿದೆ. ಈ ಸಂದರ್ಭ ಅಡಿಕೆ ಹಾನಿಕಾರಕವಾಗಿದ್ದು ಹೀಗಾಗಿ ಅಡಿಕೆ ನಿಷೇಧ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದ ಜಾರ್ಖಂಡ್‌ ನ ಗೊಡ್ಡಾದ ಸಂಸದ ನಿಶಿಕಾಂತ್‌ ದುಬೆ ಅವರನ್ನು ಭೇಟಿಯಾಗಿ ಅಡಿಕೆಯ ಸಮಗ್ರ ಮಾಹಿತಿಯನ್ನು ನೀಡಿದರು. ಅಡಿಕೆಯಿಂದ ಆರೋಗ್ಯದ ಮೇಲೆ ಹಾನಿಕಾರಿಕ ಪರಿಣಾಮಗಳಿಲ್ಲ ಎಂಬ ವರದಿಗಳು ಇದೆ. ಅನೇಕ ಸಮಯಗಳಿಂದ ಅಡಿಕೆ ತಿನ್ನುವವರೂ ಇದ್ದಾರೆ, ಅಡಿಕೆಯಲ್ಲಿ ಔಷಧೀಯ ಗುಣಗಳು ಇವೆ ಎಂಬ ವರದಿಗಳ ಮೂಲಕ ಮನವರಿಕೆ ಮಾಡಿದರು.

ಇದೇ ವೇಳೆ ಅಡಿಕೆ ಕೃಷಿ ಸಚಿವ ನರೇಂದ್ರ ಸಿಂಗ್‌ ಥೋಮರ್‌, ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಪ್ರಹ್ಲಾದ್‌ ಜೋಶಿ , ಸ್ಮೃತಿ ಇರಾನಿ ಅವರನ್ನೊಳಗೊಂಡ ತಂಡದ ಜೊತೆ ಅಡಿಕೆಯ ವಿವಿಧ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದರು. ವಿಶೇಷವಾಗಿ ಸುಳ್ಯ ಸೇರಿದಂತೆ ರಾಜ್ಯದಲ್ಲಿ ವ್ಯಾಪಕವಾಗುತ್ತಿರುವ ಅಡಿಕೆ ಹಳದಿ ಎಲೆರೋಗದ ಪರಿಹಾರ ಹಾಗೂ ಅಧ್ಯಯನದ ಬಗ್ಗೆಯೂ ಚರ್ಚೆಯಾಗಿದೆ. ಈ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ನಡೆಸಲು ಗಮನಹರಿಸುವಂತೆ ಅಡಿಕೆ ಬೆಳೆಗಾರರ ಹಾಗೂ ಸಹಕಾರಿ ಸಂಸ್ಥೆಗಳ ನಿಯೋಗ ಒತ್ತಾಯ ಮಾಡಿದೆ.

ಅಡಿಕೆ ಜಿಎಸ್‍ಟಿ ತೆರಿಗೆಯನ್ನು  ಎಪಿಎಂಸಿ ಶುಲ್ಕವನ್ನು ಕೂಡಾ ಅದರೊಂದಿಗೆ ವಿಲೀನಗೊಳಿಸಬೇಕು, ಆ ಮೂಲಕ ಕೃಷಿ ಉತ್ಪನ್ನಗಳನ್ನು ಸಂಘಟನಾ ಕ್ಷೇತ್ರದೊಳಗೆ ತಂದು ಕೃಷಿಕರಿಗೆ ಅವರ ಉತ್ಪನ್ನಗಳನ್ನು ಸಹಕಾರಿ ಸಂಸ್ಥೆಗಳಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆ ಸಹಿತ ಹಲವು ಬೇಡಿಕೆಗಳನ್ನು ಅಡಿಕೆ ಬೆಳೆಗಾರರ ನಿಯೋಗ, ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,ಗೃಹಸಚಿವ ಅಮಿತ್ ಶಾ ಸಹಿತ ಹಲವರಿಗೂ ಮನವಿ ಸಲ್ಲಿಸಿದೆ. ಅಡಿಕೆ ಅಕ್ರಮ ಆಮದು ತಡೆಯಲು ಕ್ರಮ ಆಗಬೇಕು ಹಾಗೂ ಆಮದು ಸುಂಕ ಹೆಚ್ಚಿಸಬೇಕು ಎಂದು ಉಲ್ಲೇಖಿಸಲಾಗಿದೆ.

ನಿಯೋಗದಲ್ಲಿ ಅಡಿಕೆ ಮಹಾಮಂಡಳ, ಕ್ಯಾಂಪ್ಕೋ, ರಾಜ್ಯ ಅಡಿಕೆ ಟಾಸ್ಕ್‌ಫೋರ್ಸ್‌ ಸೇರಿದಂತೆ ಸಂಘಟನೆಗಳು ಭಾಗಿಯಾಗಿದ್ದವು.

ಈ ಸಂದರ್ಭ ಅಡಿಕೆ ಮಹಾಮಂಡಳ ಅಧ್ಯಕ್ಷ ಎಚ್‌ ಎಸ್‌ ಮಂಜಪ್ಪ, ಕ್ಯಾಂಪ್ಕೋ ನಿರ್ದೇಶಕ , ಮಾಜಿ ಅಧ್ಯಕ್ಷ ಎಸ್‌ ಆರ್‌ ಸತೀಶ್ಚಂದ್ರ, ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ಪ್ರಸಾದ್‌,  ಪ್ರಮುಖರಾದ ಶಿವಕುಮಾರ್‌ ಚನ್ನಗಿರಿ, ಯಡಗೆರೆ ಸುಬ್ರಹ್ಮಣ್ಯ, ಡಾ.ಚೌಡಪ್ಪ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

3 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

13 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

14 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

14 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

20 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

22 hours ago