ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ ಉಂಟಾಗಿದೆ. ಗಾಳಿಯ ಗುಣಮಟ್ಟವು ತೀವ್ರ ಹದಗೆಟ್ಟಿದೆ. ಹಲವಾರು ಸ್ಥಳಗಳಲ್ಲಿ ಆತಂಕಕಾರಿ ಮಟ್ಟವನ್ನು ತಲುಪಿದೆ. ಹೆಚ್ಚುತ್ತಿರುವ ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಶುಕ್ರವಾರ ಮತ್ತು ಶನಿವಾರ ರಜೆ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಇದೇ ವೇಳೆ ಎರಡು ದಿನಗಳ ಕಾಲ ಎಲ್ಲಾ ನಿರ್ಮಾಣ ಕಾರ್ಯಗಳನ್ನೂ ಸ್ಥಗಿತಗೊಳಿಸಲಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ.
ಪ್ರತೀ ವರ್ಷ ನವೆಂಬರ್ 15 ರವರೆಗೆ ದೆಹಲಿಯ ವಾಯುಮಾಲಿನ್ಯವು ಹೆಚ್ಚಾಗುತ್ತದೆ. ಇದಕ್ಕೆ ಪ್ರಮುಖ ಕಾರಣ, ಪಂಜಾಬ್ ಮತ್ತು ಹರ್ಯಾಣದ ರೈತರು ಕೃಷಿ ತ್ಯಾಜ್ಯ ಸುಡುವುದೇ ಪ್ರಮುಖ ಕಾರಣ. ಈ ವರ್ಷ ಸೆಪ್ಟೆಂಬರ್ 15 ರಿಂದ ಪಂಜಾಬ್ ಮತ್ತು ಹರ್ಯಾಣ ಎರಡರಲ್ಲೂ ಕೃಷಿ ತ್ಯಾಜ್ಯ ಸುಡುವ ಘಟನೆಗಳು ಕಡಿಮೆಯಾಗಿದೆ ಆದರೆ ಕಳೆದ ಕೆಲವು ದಿನಗಳಲ್ಲಿ ಏರಿಕೆ ಕಂಡುಬಂದಿದೆ. ತಾಪಮಾನ ಮತ್ತು ಗಾಳಿಯ ವೇಗದಲ್ಲಿ ನಿರೀಕ್ಷಿತ ಕುಸಿತದ ಜೊತೆಗೆ ಕೃಷಿ ಬೆಂಕಿಯ ಕಾರಣದಿಂದ ಮುಂದಿನ 15-20 ದಿನಗಳಲ್ಲಿ ದೆಹಲಿಯಲ್ಲಿ ಮಾಲಿನ್ಯದ ಮಟ್ಟವು ಇನ್ನಷ್ಟು ಹದಗೆಡಬಹುದು ಎಂದು ಸರ್ಕಾರಿ ಸಂಸ್ಥೆಗಳು ಈ ಹಿಂದೆ ಎಚ್ಚರಿಸಿತ್ತು.
Delhi Chief Minister Arvind Kejriwal on Thursday announced that all government and private primary schools in the capital city will remain shut for the next two days in view of the rising air pollution levels.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…