ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ ಉಂಟಾಗಿದೆ. ಗಾಳಿಯ ಗುಣಮಟ್ಟವು ತೀವ್ರ ಹದಗೆಟ್ಟಿದೆ. ಹಲವಾರು ಸ್ಥಳಗಳಲ್ಲಿ ಆತಂಕಕಾರಿ ಮಟ್ಟವನ್ನು ತಲುಪಿದೆ. ಹೆಚ್ಚುತ್ತಿರುವ ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಶುಕ್ರವಾರ ಮತ್ತು ಶನಿವಾರ ರಜೆ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಇದೇ ವೇಳೆ ಎರಡು ದಿನಗಳ ಕಾಲ ಎಲ್ಲಾ ನಿರ್ಮಾಣ ಕಾರ್ಯಗಳನ್ನೂ ಸ್ಥಗಿತಗೊಳಿಸಲಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ.
ಪ್ರತೀ ವರ್ಷ ನವೆಂಬರ್ 15 ರವರೆಗೆ ದೆಹಲಿಯ ವಾಯುಮಾಲಿನ್ಯವು ಹೆಚ್ಚಾಗುತ್ತದೆ. ಇದಕ್ಕೆ ಪ್ರಮುಖ ಕಾರಣ, ಪಂಜಾಬ್ ಮತ್ತು ಹರ್ಯಾಣದ ರೈತರು ಕೃಷಿ ತ್ಯಾಜ್ಯ ಸುಡುವುದೇ ಪ್ರಮುಖ ಕಾರಣ. ಈ ವರ್ಷ ಸೆಪ್ಟೆಂಬರ್ 15 ರಿಂದ ಪಂಜಾಬ್ ಮತ್ತು ಹರ್ಯಾಣ ಎರಡರಲ್ಲೂ ಕೃಷಿ ತ್ಯಾಜ್ಯ ಸುಡುವ ಘಟನೆಗಳು ಕಡಿಮೆಯಾಗಿದೆ ಆದರೆ ಕಳೆದ ಕೆಲವು ದಿನಗಳಲ್ಲಿ ಏರಿಕೆ ಕಂಡುಬಂದಿದೆ. ತಾಪಮಾನ ಮತ್ತು ಗಾಳಿಯ ವೇಗದಲ್ಲಿ ನಿರೀಕ್ಷಿತ ಕುಸಿತದ ಜೊತೆಗೆ ಕೃಷಿ ಬೆಂಕಿಯ ಕಾರಣದಿಂದ ಮುಂದಿನ 15-20 ದಿನಗಳಲ್ಲಿ ದೆಹಲಿಯಲ್ಲಿ ಮಾಲಿನ್ಯದ ಮಟ್ಟವು ಇನ್ನಷ್ಟು ಹದಗೆಡಬಹುದು ಎಂದು ಸರ್ಕಾರಿ ಸಂಸ್ಥೆಗಳು ಈ ಹಿಂದೆ ಎಚ್ಚರಿಸಿತ್ತು.
Delhi Chief Minister Arvind Kejriwal on Thursday announced that all government and private primary schools in the capital city will remain shut for the next two days in view of the rising air pollution levels.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…