ಸಚಿವಸಂಪುಟ ರಚನೆಗೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​

May 24, 2023
2:08 PM

ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಸರ್ಕಸ್ ಶುರುವಾಗಿದೆ. ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟ ಸೇರಿದ್ದರು. ಇದೀಗ ಉಳಿದ ಸ್ಥಾನ ಭರ್ತಿ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಗೆ ತೆರಳಲಿದ್ದಾರೆ.

ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದ ಜತೆಗೆ ಉಭಯ ನಾಯಕರ ಆಪ್ತರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರವೂ ಅಡಕವಾಗಿರುವುದರಿಂದ ಆಯ್ಕೆ ಕಗ್ಗಂಟಾಗುತ್ತಿದೆ. ಕಳೆದ ಬಾರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಕೆಲ ನಿರ್ದಿಷ್ಟ ಹೆಸರುಗಳ ಬಗ್ಗೆ ಪಟ್ಟು ಹಿಡಿದಿದ್ದರಿಂದ 28 ಮಂದಿಯ ಬದಲಾಗಿ ಕೇವಲ 8 ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ತೀರ್ಮಾನ ಮಾಡಲಾಗಿತ್ತು. ಈ ಬಾರಿ ಇಂತಹ ಗೊಂದಲ ಉಂಟಾಗದಿರಲಿ ಎಂಬ ಕಾರಣಕ್ಕೆ ರಾಜ್ಯಕ್ಕೆ ಮಂಗಳವಾರವೇ ಆಗಮಿಸಿರುವ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಉಭಯ ನಾಯಕರೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ | ದಾವಣಗೆರೆಯಲ್ಲಿ ರಾಜ್ಯ ಚುನಾವಣಾ ಆಯುಕ್ತರಿಂದ ಸಿದ್ಧತೆ ಪರಿಶೀಲನೆ
November 20, 2025
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror