ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಸರ್ಕಸ್ ಶುರುವಾಗಿದೆ. ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟ ಸೇರಿದ್ದರು. ಇದೀಗ ಉಳಿದ ಸ್ಥಾನ ಭರ್ತಿ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.
ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದ ಜತೆಗೆ ಉಭಯ ನಾಯಕರ ಆಪ್ತರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರವೂ ಅಡಕವಾಗಿರುವುದರಿಂದ ಆಯ್ಕೆ ಕಗ್ಗಂಟಾಗುತ್ತಿದೆ. ಕಳೆದ ಬಾರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಕೆಲ ನಿರ್ದಿಷ್ಟ ಹೆಸರುಗಳ ಬಗ್ಗೆ ಪಟ್ಟು ಹಿಡಿದಿದ್ದರಿಂದ 28 ಮಂದಿಯ ಬದಲಾಗಿ ಕೇವಲ 8 ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ತೀರ್ಮಾನ ಮಾಡಲಾಗಿತ್ತು. ಈ ಬಾರಿ ಇಂತಹ ಗೊಂದಲ ಉಂಟಾಗದಿರಲಿ ಎಂಬ ಕಾರಣಕ್ಕೆ ರಾಜ್ಯಕ್ಕೆ ಮಂಗಳವಾರವೇ ಆಗಮಿಸಿರುವ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಉಭಯ ನಾಯಕರೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದಾರೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…