ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಸರ್ಕಸ್ ಶುರುವಾಗಿದೆ. ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟ ಸೇರಿದ್ದರು. ಇದೀಗ ಉಳಿದ ಸ್ಥಾನ ಭರ್ತಿ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.
ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದ ಜತೆಗೆ ಉಭಯ ನಾಯಕರ ಆಪ್ತರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರವೂ ಅಡಕವಾಗಿರುವುದರಿಂದ ಆಯ್ಕೆ ಕಗ್ಗಂಟಾಗುತ್ತಿದೆ. ಕಳೆದ ಬಾರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಕೆಲ ನಿರ್ದಿಷ್ಟ ಹೆಸರುಗಳ ಬಗ್ಗೆ ಪಟ್ಟು ಹಿಡಿದಿದ್ದರಿಂದ 28 ಮಂದಿಯ ಬದಲಾಗಿ ಕೇವಲ 8 ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ತೀರ್ಮಾನ ಮಾಡಲಾಗಿತ್ತು. ಈ ಬಾರಿ ಇಂತಹ ಗೊಂದಲ ಉಂಟಾಗದಿರಲಿ ಎಂಬ ಕಾರಣಕ್ಕೆ ರಾಜ್ಯಕ್ಕೆ ಮಂಗಳವಾರವೇ ಆಗಮಿಸಿರುವ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಉಭಯ ನಾಯಕರೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದಾರೆ.
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…