ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಸರ್ಕಸ್ ಶುರುವಾಗಿದೆ. ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟ ಸೇರಿದ್ದರು. ಇದೀಗ ಉಳಿದ ಸ್ಥಾನ ಭರ್ತಿ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.
ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದ ಜತೆಗೆ ಉಭಯ ನಾಯಕರ ಆಪ್ತರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರವೂ ಅಡಕವಾಗಿರುವುದರಿಂದ ಆಯ್ಕೆ ಕಗ್ಗಂಟಾಗುತ್ತಿದೆ. ಕಳೆದ ಬಾರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಕೆಲ ನಿರ್ದಿಷ್ಟ ಹೆಸರುಗಳ ಬಗ್ಗೆ ಪಟ್ಟು ಹಿಡಿದಿದ್ದರಿಂದ 28 ಮಂದಿಯ ಬದಲಾಗಿ ಕೇವಲ 8 ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ತೀರ್ಮಾನ ಮಾಡಲಾಗಿತ್ತು. ಈ ಬಾರಿ ಇಂತಹ ಗೊಂದಲ ಉಂಟಾಗದಿರಲಿ ಎಂಬ ಕಾರಣಕ್ಕೆ ರಾಜ್ಯಕ್ಕೆ ಮಂಗಳವಾರವೇ ಆಗಮಿಸಿರುವ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಉಭಯ ನಾಯಕರೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…