ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ : ದೆಹಲಿಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಪಟಾಕಿ ಮಾರಾಟ, ಬಳಕೆ ನಿಷೇಧಕ್ಕೆ ಆದೇಶ

November 9, 2020
4:23 PM
ಭಾರತದ ರಾಜಧಾನಿ ನವದೆಹಲಿಯಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ವಾಯುಮಾಲಿನ್ಯ ಹೆಚ್ಚಾಗಿರುವುದರಿಂದ ನವೆಂಬರ್ 30ರವರೆಗೆ ಪಟಾಕಿ ನಿಷೇಧ ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್​ಜಿಟಿ) ಆದೇಶ ನೀಡಿದೆ. ಇಂದು ಮಧ್ಯರಾತ್ರಿಯಿಂದಲೇ ಈ ಆದೇಶ ಜಾರಿಯಾಗಲಿದ್ದು, ಇನ್ನು 20 ದಿನಗಳ ಕಾಲ ಪಟಾಕಿ ಮಾರಾಟ, ಬಳಕೆಯನ್ನು ನಿಷೇಧಿಸಲಾಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಈ ವರ್ಷ ದೆಹಲಿಯಲ್ಲಿ ವಾಯು ಗುಣಮಟ್ಟ ತೀರಾ ಹದಗೆಟ್ಟಿದೆ. ಇದೀಗ ದೀಪಾವಳಿಯೂ ಸಮೀಪಿಸಿರುವುದರಿಂದ ಪಟಾಕಿಯಿಂದ ವಾಯುಮಾಲಿನ್ಯ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.

ಇದರ ಜೊತೆಗೆ ಗಾಳಿಯ ಗುಣಮಟ್ಟ ಕಡಿಮೆ ಇರುವ ನಗರಗಳಲ್ಲೂ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಂಭ್ರಮ ಸಂತೋಷಕ್ಕಾಗಿ ಪಟಾಕಿ ಹಚ್ಚಬೇಕೆ ಹೊರತು, ರೋಗ ಮತ್ತು ಸಾವನ್ನು ತರಲು ಅಲ್ಲ ಎಂದು ಅಭಿಪ್ರಾಯ ಪಟ್ಟಿರುವ ಎನ್ ಜಿಟಿ ಅಧ್ಯಕ್ಷ ಆದರ್ಶ್ ಕುಮಾರ್ ಗೋಯೆಲ್ ದೇಶದ ಎಲ್ಲಾ ನಗರ ಮತ್ತು ಪಟ್ಟಣಗಳಿಗೆ ಅನ್ವಯಸಲಿದ್ದು, 2019ರಲ್ಲಿ ಮಾಲಿನ್ಯ ಹೆಚ್ಚಿದ್ದ ಪಟ್ಟಿಯಲ್ಲಿ ಸೇರಿದ್ದ ನಗರಗಳಿಗೂ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸೇರಿ ವಾಯುಮಾಲಿನ್ಯ ಹೆಚ್ಚಾಗಿ ಇರದ ಭಾಗಗಳಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ನೀಡಲಾಗುವುದು ಎಂದು ಕೂಡ ತನ್ನ ಆದೇಶದಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡುವುದಾಗಿ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror