Advertisement
ಸುದ್ದಿಗಳು

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ : ದೆಹಲಿಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಪಟಾಕಿ ಮಾರಾಟ, ಬಳಕೆ ನಿಷೇಧಕ್ಕೆ ಆದೇಶ

Share
ಭಾರತದ ರಾಜಧಾನಿ ನವದೆಹಲಿಯಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ವಾಯುಮಾಲಿನ್ಯ ಹೆಚ್ಚಾಗಿರುವುದರಿಂದ ನವೆಂಬರ್ 30ರವರೆಗೆ ಪಟಾಕಿ ನಿಷೇಧ ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್​ಜಿಟಿ) ಆದೇಶ ನೀಡಿದೆ. ಇಂದು ಮಧ್ಯರಾತ್ರಿಯಿಂದಲೇ ಈ ಆದೇಶ ಜಾರಿಯಾಗಲಿದ್ದು, ಇನ್ನು 20 ದಿನಗಳ ಕಾಲ ಪಟಾಕಿ ಮಾರಾಟ, ಬಳಕೆಯನ್ನು ನಿಷೇಧಿಸಲಾಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಈ ವರ್ಷ ದೆಹಲಿಯಲ್ಲಿ ವಾಯು ಗುಣಮಟ್ಟ ತೀರಾ ಹದಗೆಟ್ಟಿದೆ. ಇದೀಗ ದೀಪಾವಳಿಯೂ ಸಮೀಪಿಸಿರುವುದರಿಂದ ಪಟಾಕಿಯಿಂದ ವಾಯುಮಾಲಿನ್ಯ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.

ಇದರ ಜೊತೆಗೆ ಗಾಳಿಯ ಗುಣಮಟ್ಟ ಕಡಿಮೆ ಇರುವ ನಗರಗಳಲ್ಲೂ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಂಭ್ರಮ ಸಂತೋಷಕ್ಕಾಗಿ ಪಟಾಕಿ ಹಚ್ಚಬೇಕೆ ಹೊರತು, ರೋಗ ಮತ್ತು ಸಾವನ್ನು ತರಲು ಅಲ್ಲ ಎಂದು ಅಭಿಪ್ರಾಯ ಪಟ್ಟಿರುವ ಎನ್ ಜಿಟಿ ಅಧ್ಯಕ್ಷ ಆದರ್ಶ್ ಕುಮಾರ್ ಗೋಯೆಲ್ ದೇಶದ ಎಲ್ಲಾ ನಗರ ಮತ್ತು ಪಟ್ಟಣಗಳಿಗೆ ಅನ್ವಯಸಲಿದ್ದು, 2019ರಲ್ಲಿ ಮಾಲಿನ್ಯ ಹೆಚ್ಚಿದ್ದ ಪಟ್ಟಿಯಲ್ಲಿ ಸೇರಿದ್ದ ನಗರಗಳಿಗೂ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸೇರಿ ವಾಯುಮಾಲಿನ್ಯ ಹೆಚ್ಚಾಗಿ ಇರದ ಭಾಗಗಳಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ನೀಡಲಾಗುವುದು ಎಂದು ಕೂಡ ತನ್ನ ಆದೇಶದಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡುವುದಾಗಿ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

2 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

2 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

12 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

12 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

13 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

21 hours ago