ಕಳೆದ ತಿಂಗಳಿಗೆ ಹೋಲಿಸಿದರೆ ಈ ವರ್ಷ ದೆಹಲಿಯಲ್ಲಿ ವಾಯು ಗುಣಮಟ್ಟ ತೀರಾ ಹದಗೆಟ್ಟಿದೆ. ಇದೀಗ ದೀಪಾವಳಿಯೂ ಸಮೀಪಿಸಿರುವುದರಿಂದ ಪಟಾಕಿಯಿಂದ ವಾಯುಮಾಲಿನ್ಯ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.
ಇದರ ಜೊತೆಗೆ ಗಾಳಿಯ ಗುಣಮಟ್ಟ ಕಡಿಮೆ ಇರುವ ನಗರಗಳಲ್ಲೂ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಂಭ್ರಮ ಸಂತೋಷಕ್ಕಾಗಿ ಪಟಾಕಿ ಹಚ್ಚಬೇಕೆ ಹೊರತು, ರೋಗ ಮತ್ತು ಸಾವನ್ನು ತರಲು ಅಲ್ಲ ಎಂದು ಅಭಿಪ್ರಾಯ ಪಟ್ಟಿರುವ ಎನ್ ಜಿಟಿ ಅಧ್ಯಕ್ಷ ಆದರ್ಶ್ ಕುಮಾರ್ ಗೋಯೆಲ್ ದೇಶದ ಎಲ್ಲಾ ನಗರ ಮತ್ತು ಪಟ್ಟಣಗಳಿಗೆ ಅನ್ವಯಸಲಿದ್ದು, 2019ರಲ್ಲಿ ಮಾಲಿನ್ಯ ಹೆಚ್ಚಿದ್ದ ಪಟ್ಟಿಯಲ್ಲಿ ಸೇರಿದ್ದ ನಗರಗಳಿಗೂ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸೇರಿ ವಾಯುಮಾಲಿನ್ಯ ಹೆಚ್ಚಾಗಿ ಇರದ ಭಾಗಗಳಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ನೀಡಲಾಗುವುದು ಎಂದು ಕೂಡ ತನ್ನ ಆದೇಶದಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡುವುದಾಗಿ ಘೋಷಿಸಲಾಗಿದೆ.
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…