ಕಳೆದ ತಿಂಗಳಿಗೆ ಹೋಲಿಸಿದರೆ ಈ ವರ್ಷ ದೆಹಲಿಯಲ್ಲಿ ವಾಯು ಗುಣಮಟ್ಟ ತೀರಾ ಹದಗೆಟ್ಟಿದೆ. ಇದೀಗ ದೀಪಾವಳಿಯೂ ಸಮೀಪಿಸಿರುವುದರಿಂದ ಪಟಾಕಿಯಿಂದ ವಾಯುಮಾಲಿನ್ಯ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.
ಇದರ ಜೊತೆಗೆ ಗಾಳಿಯ ಗುಣಮಟ್ಟ ಕಡಿಮೆ ಇರುವ ನಗರಗಳಲ್ಲೂ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಂಭ್ರಮ ಸಂತೋಷಕ್ಕಾಗಿ ಪಟಾಕಿ ಹಚ್ಚಬೇಕೆ ಹೊರತು, ರೋಗ ಮತ್ತು ಸಾವನ್ನು ತರಲು ಅಲ್ಲ ಎಂದು ಅಭಿಪ್ರಾಯ ಪಟ್ಟಿರುವ ಎನ್ ಜಿಟಿ ಅಧ್ಯಕ್ಷ ಆದರ್ಶ್ ಕುಮಾರ್ ಗೋಯೆಲ್ ದೇಶದ ಎಲ್ಲಾ ನಗರ ಮತ್ತು ಪಟ್ಟಣಗಳಿಗೆ ಅನ್ವಯಸಲಿದ್ದು, 2019ರಲ್ಲಿ ಮಾಲಿನ್ಯ ಹೆಚ್ಚಿದ್ದ ಪಟ್ಟಿಯಲ್ಲಿ ಸೇರಿದ್ದ ನಗರಗಳಿಗೂ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸೇರಿ ವಾಯುಮಾಲಿನ್ಯ ಹೆಚ್ಚಾಗಿ ಇರದ ಭಾಗಗಳಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ನೀಡಲಾಗುವುದು ಎಂದು ಕೂಡ ತನ್ನ ಆದೇಶದಲ್ಲಿ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡುವುದಾಗಿ ಘೋಷಿಸಲಾಗಿದೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…