Advertisement
ರಾಷ್ಟ್ರೀಯ

ದೆಹಲಿ ಆರೋಗ್ಯ ಸಚಿವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ | ನಕಲಿ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದ ಎಎಪಿ |

Share

ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ಸಂಜೆ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಈ ಬಂಧನ ನಡೆದಿದೆ. 8 ವರ್ಷಗಳ ಹಿಂದಿನ ಮುಗಿದ ಪ್ರಕರಣದಲ್ಲಿ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.

ಸುಮಾರು 8 ವರ್ಷಗಳ ಹಿಂದಿನ ಕೇಸ್‌ ಇದಾಗಿದ್ದು ಸತ್ಯೇಂದ್ರ ಜೈನ್‌ ಅವರು ಅಧಿಕಾರಿಯಾಗಿದ್ದಾಗ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿ  ಜಾರಿ ನಿರ್ದೇಶನಾಲಯ ಬಂಧಿಸಿದೆ.  ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ಮುಖಂಡರು,  ಹಿಮಾಚಲ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಮಾಡಲಾಗಿದೆ ಎಂದು ಹೇಳಿದೆ.ಜೈನ್ ಅವರನ್ನು ಹಿಮಾಚಲ ಪ್ರದೇಶ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಏಳು ಬಾರಿ ಇಡಿ ಮುಂದೆ ಹಾಜರಾಗಿದ್ದರು, ಸಿಬಿಐ ಅವರಿಗೆ ಕ್ಲೀನ್ ಚಿಟ್ ನೀಡಿದೆ, ಆದರೆ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.

ಈ ಪ್ರಕರಣದ ಬಗ್ಗೆ ಟ್ವೀಟ್‌ ಮಾಡಿದ ಎಎಪಿ ಮುಖಂಡ ಮನೀಶ್‌ ಸಿಸೋಡಿಯಾ, ‘ಸತ್ಯೇಂದ್ರ ಜೈನ್ ವಿರುದ್ಧ ಎಂಟು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದೆ. ಇದು ನಕಲಿಯಾಗಿದ್ದು ಈವರೆಗೆ ಹಲವು ಬಾರಿ ಇಡಿ ಕರೆ ಮಾಡಿದೆ. ಆದರೂ ಈ ಪ್ರಕರಣದಲ್ಲಿ ಏನೂ ಸಿಗದ ಕಾರಣ ಕೆಲ ದಿನಗಳಿಂದ ಇಡಿ ಕರೆ ಮಾಡುವುದನ್ನು ನಿಲ್ಲಿಸಿತ್ತು. ಈಗ ಮತ್ತೆ ಶುರುವಾಗಿದೆ. ಏಕೆಂದರೆ ಅವರು ಹಿಮಾಚಲ ಪ್ರದೇಶ ಚುನಾವಣೆಯ ಉಸ್ತುವಾರಿಯಾಗಿದ್ದಾರೆ ಎಂದು  ಟ್ವೀಟ್ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

9 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

9 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

13 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago