ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ಸಂಜೆ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಈ ಬಂಧನ ನಡೆದಿದೆ. 8 ವರ್ಷಗಳ ಹಿಂದಿನ ಮುಗಿದ ಪ್ರಕರಣದಲ್ಲಿ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.
ಸುಮಾರು 8 ವರ್ಷಗಳ ಹಿಂದಿನ ಕೇಸ್ ಇದಾಗಿದ್ದು ಸತ್ಯೇಂದ್ರ ಜೈನ್ ಅವರು ಅಧಿಕಾರಿಯಾಗಿದ್ದಾಗ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ಮುಖಂಡರು, ಹಿಮಾಚಲ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಮಾಡಲಾಗಿದೆ ಎಂದು ಹೇಳಿದೆ.ಜೈನ್ ಅವರನ್ನು ಹಿಮಾಚಲ ಪ್ರದೇಶ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಏಳು ಬಾರಿ ಇಡಿ ಮುಂದೆ ಹಾಜರಾಗಿದ್ದರು, ಸಿಬಿಐ ಅವರಿಗೆ ಕ್ಲೀನ್ ಚಿಟ್ ನೀಡಿದೆ, ಆದರೆ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.
ಈ ಪ್ರಕರಣದ ಬಗ್ಗೆ ಟ್ವೀಟ್ ಮಾಡಿದ ಎಎಪಿ ಮುಖಂಡ ಮನೀಶ್ ಸಿಸೋಡಿಯಾ, ‘ಸತ್ಯೇಂದ್ರ ಜೈನ್ ವಿರುದ್ಧ ಎಂಟು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದೆ. ಇದು ನಕಲಿಯಾಗಿದ್ದು ಈವರೆಗೆ ಹಲವು ಬಾರಿ ಇಡಿ ಕರೆ ಮಾಡಿದೆ. ಆದರೂ ಈ ಪ್ರಕರಣದಲ್ಲಿ ಏನೂ ಸಿಗದ ಕಾರಣ ಕೆಲ ದಿನಗಳಿಂದ ಇಡಿ ಕರೆ ಮಾಡುವುದನ್ನು ನಿಲ್ಲಿಸಿತ್ತು. ಈಗ ಮತ್ತೆ ಶುರುವಾಗಿದೆ. ಏಕೆಂದರೆ ಅವರು ಹಿಮಾಚಲ ಪ್ರದೇಶ ಚುನಾವಣೆಯ ಉಸ್ತುವಾರಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…