Advertisement
ರಾಷ್ಟ್ರೀಯ

ದೆಹಲಿ ಆರೋಗ್ಯ ಸಚಿವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ | ನಕಲಿ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದ ಎಎಪಿ |

Share

ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ಸಂಜೆ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಈ ಬಂಧನ ನಡೆದಿದೆ. 8 ವರ್ಷಗಳ ಹಿಂದಿನ ಮುಗಿದ ಪ್ರಕರಣದಲ್ಲಿ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.

ಸುಮಾರು 8 ವರ್ಷಗಳ ಹಿಂದಿನ ಕೇಸ್‌ ಇದಾಗಿದ್ದು ಸತ್ಯೇಂದ್ರ ಜೈನ್‌ ಅವರು ಅಧಿಕಾರಿಯಾಗಿದ್ದಾಗ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿ  ಜಾರಿ ನಿರ್ದೇಶನಾಲಯ ಬಂಧಿಸಿದೆ.  ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ಮುಖಂಡರು,  ಹಿಮಾಚಲ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಮಾಡಲಾಗಿದೆ ಎಂದು ಹೇಳಿದೆ.ಜೈನ್ ಅವರನ್ನು ಹಿಮಾಚಲ ಪ್ರದೇಶ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಏಳು ಬಾರಿ ಇಡಿ ಮುಂದೆ ಹಾಜರಾಗಿದ್ದರು, ಸಿಬಿಐ ಅವರಿಗೆ ಕ್ಲೀನ್ ಚಿಟ್ ನೀಡಿದೆ, ಆದರೆ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.

ಈ ಪ್ರಕರಣದ ಬಗ್ಗೆ ಟ್ವೀಟ್‌ ಮಾಡಿದ ಎಎಪಿ ಮುಖಂಡ ಮನೀಶ್‌ ಸಿಸೋಡಿಯಾ, ‘ಸತ್ಯೇಂದ್ರ ಜೈನ್ ವಿರುದ್ಧ ಎಂಟು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದೆ. ಇದು ನಕಲಿಯಾಗಿದ್ದು ಈವರೆಗೆ ಹಲವು ಬಾರಿ ಇಡಿ ಕರೆ ಮಾಡಿದೆ. ಆದರೂ ಈ ಪ್ರಕರಣದಲ್ಲಿ ಏನೂ ಸಿಗದ ಕಾರಣ ಕೆಲ ದಿನಗಳಿಂದ ಇಡಿ ಕರೆ ಮಾಡುವುದನ್ನು ನಿಲ್ಲಿಸಿತ್ತು. ಈಗ ಮತ್ತೆ ಶುರುವಾಗಿದೆ. ಏಕೆಂದರೆ ಅವರು ಹಿಮಾಚಲ ಪ್ರದೇಶ ಚುನಾವಣೆಯ ಉಸ್ತುವಾರಿಯಾಗಿದ್ದಾರೆ ಎಂದು  ಟ್ವೀಟ್ ಮಾಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

7 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

13 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

23 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago