ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ಸಂಜೆ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಈ ಬಂಧನ ನಡೆದಿದೆ. 8 ವರ್ಷಗಳ ಹಿಂದಿನ ಮುಗಿದ ಪ್ರಕರಣದಲ್ಲಿ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.
ಸುಮಾರು 8 ವರ್ಷಗಳ ಹಿಂದಿನ ಕೇಸ್ ಇದಾಗಿದ್ದು ಸತ್ಯೇಂದ್ರ ಜೈನ್ ಅವರು ಅಧಿಕಾರಿಯಾಗಿದ್ದಾಗ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ಮುಖಂಡರು, ಹಿಮಾಚಲ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಮಾಡಲಾಗಿದೆ ಎಂದು ಹೇಳಿದೆ.ಜೈನ್ ಅವರನ್ನು ಹಿಮಾಚಲ ಪ್ರದೇಶ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಏಳು ಬಾರಿ ಇಡಿ ಮುಂದೆ ಹಾಜರಾಗಿದ್ದರು, ಸಿಬಿಐ ಅವರಿಗೆ ಕ್ಲೀನ್ ಚಿಟ್ ನೀಡಿದೆ, ಆದರೆ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.
ಈ ಪ್ರಕರಣದ ಬಗ್ಗೆ ಟ್ವೀಟ್ ಮಾಡಿದ ಎಎಪಿ ಮುಖಂಡ ಮನೀಶ್ ಸಿಸೋಡಿಯಾ, ‘ಸತ್ಯೇಂದ್ರ ಜೈನ್ ವಿರುದ್ಧ ಎಂಟು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದೆ. ಇದು ನಕಲಿಯಾಗಿದ್ದು ಈವರೆಗೆ ಹಲವು ಬಾರಿ ಇಡಿ ಕರೆ ಮಾಡಿದೆ. ಆದರೂ ಈ ಪ್ರಕರಣದಲ್ಲಿ ಏನೂ ಸಿಗದ ಕಾರಣ ಕೆಲ ದಿನಗಳಿಂದ ಇಡಿ ಕರೆ ಮಾಡುವುದನ್ನು ನಿಲ್ಲಿಸಿತ್ತು. ಈಗ ಮತ್ತೆ ಶುರುವಾಗಿದೆ. ಏಕೆಂದರೆ ಅವರು ಹಿಮಾಚಲ ಪ್ರದೇಶ ಚುನಾವಣೆಯ ಉಸ್ತುವಾರಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…