Advertisement
ರಾಷ್ಟ್ರೀಯ

ದೆಹಲಿ ಆರೋಗ್ಯ ಸಚಿವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ | ನಕಲಿ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದ ಎಎಪಿ |

Share

ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ಸಂಜೆ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಈ ಬಂಧನ ನಡೆದಿದೆ. 8 ವರ್ಷಗಳ ಹಿಂದಿನ ಮುಗಿದ ಪ್ರಕರಣದಲ್ಲಿ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.

ಸುಮಾರು 8 ವರ್ಷಗಳ ಹಿಂದಿನ ಕೇಸ್‌ ಇದಾಗಿದ್ದು ಸತ್ಯೇಂದ್ರ ಜೈನ್‌ ಅವರು ಅಧಿಕಾರಿಯಾಗಿದ್ದಾಗ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿ  ಜಾರಿ ನಿರ್ದೇಶನಾಲಯ ಬಂಧಿಸಿದೆ.  ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ಮುಖಂಡರು,  ಹಿಮಾಚಲ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಮಾಡಲಾಗಿದೆ ಎಂದು ಹೇಳಿದೆ.ಜೈನ್ ಅವರನ್ನು ಹಿಮಾಚಲ ಪ್ರದೇಶ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಏಳು ಬಾರಿ ಇಡಿ ಮುಂದೆ ಹಾಜರಾಗಿದ್ದರು, ಸಿಬಿಐ ಅವರಿಗೆ ಕ್ಲೀನ್ ಚಿಟ್ ನೀಡಿದೆ, ಆದರೆ ಇದೀಗ ರಾಜಕೀಯ ಪ್ರೇರಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಹೇಳಿದೆ.

ಈ ಪ್ರಕರಣದ ಬಗ್ಗೆ ಟ್ವೀಟ್‌ ಮಾಡಿದ ಎಎಪಿ ಮುಖಂಡ ಮನೀಶ್‌ ಸಿಸೋಡಿಯಾ, ‘ಸತ್ಯೇಂದ್ರ ಜೈನ್ ವಿರುದ್ಧ ಎಂಟು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದೆ. ಇದು ನಕಲಿಯಾಗಿದ್ದು ಈವರೆಗೆ ಹಲವು ಬಾರಿ ಇಡಿ ಕರೆ ಮಾಡಿದೆ. ಆದರೂ ಈ ಪ್ರಕರಣದಲ್ಲಿ ಏನೂ ಸಿಗದ ಕಾರಣ ಕೆಲ ದಿನಗಳಿಂದ ಇಡಿ ಕರೆ ಮಾಡುವುದನ್ನು ನಿಲ್ಲಿಸಿತ್ತು. ಈಗ ಮತ್ತೆ ಶುರುವಾಗಿದೆ. ಏಕೆಂದರೆ ಅವರು ಹಿಮಾಚಲ ಪ್ರದೇಶ ಚುನಾವಣೆಯ ಉಸ್ತುವಾರಿಯಾಗಿದ್ದಾರೆ ಎಂದು  ಟ್ವೀಟ್ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

21 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago