ದೀಪಾವಳಿ ಹಬ್ಬದಂದು ದೆಹಲಿಯಲ್ಲಿ ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದ್ದಾರೆ.
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಧಾನಿಯಲ್ಲಿ ಪಟಾಕಿ ಉತ್ಪಾದನೆ, ಶೇಖರಣೆ ಮತ್ತು ಮಾರಾಟಕ್ಕೆ 5,000 ರೂ.ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದರು.
ಸೆಪ್ಟೆಂಬರ್ ನಲ್ಲಿ, ನಗರಾಡಳಿತವು ದೀಪಾವಳಿ ಸೇರಿದಂತೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ಜನವರಿ 1 ರವರೆಗೆ ಸಂಪೂರ್ಣ ನಿಷೇಧಿಸಿದೆ.
ಕಳೆದ ಎರಡು ವರ್ಷಗಳಿಂದ ಇದೇ ಪದ್ಧತಿಯನ್ನು ಅನುಸರಿಸಲಾಗುತ್ತಿದೆ. ಅಕ್ಟೋಬರ್ 21 ರಂದು ‘ದಿಯೇ ಜಲವೋ ಪತಾಖೆ ನಹಿ” ಎಂಬ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗುವುದು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…