ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು | ದೀಪಾವಳಿ ಸಂದರ್ಭದಲ್ಲಿ ರೈತರಿಗೆ ಪರಿಹಾರ ಸಿಗಲಿ | ವಿಪಕ್ಷಗಳ ಒತ್ತಾಯ

October 28, 2024
12:08 PM

ರಾಜ್ಯದಲ್ಲಿ ವಿಪರೀತ ಮಳೆಗೆ ಬೆಳೆಹಾನಿ ಸಂಭವಿಸಿದೆ. ಹೀಗಾಗಿ ರೈತರಿಗೆ ತಕ್ಷಣವೇ ಪರಿಹಾರ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿದೆ. ಸರ್ಕಾರವು ಬೆಳೆ ಹಾನಿ ಸಮೀಕ್ಷೆಗೆ ಮುಂದಾಗುತ್ತಿದೆ.

Advertisement

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹವಾಮಾನ ವೈಪರಿತ್ಯ ಉಂಟಾಗಿ ಅತಿವೃಷ್ಟಿಯಿಂದ ಈ ಬಾರಿ ರಾಜ್ಯದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ರಾಜ್ಯ ಸರ್ಕಾರ ಪರಿಹಾರ ನೀಡುವ ಮೂಲಕ ರೈತರಿಗೆ ಆತ್ಮಸ್ಥೈರ್ಯ ನೀಡುವ ಕೆಲಸವನ್ನು ಮಾಡಬೇಕಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಎಚ್ .ಡಿ ಕುಮಾರಸ್ವಾಮಿ ಹೇಳಿದ್ದಾರೆ.  ಸುಮಾರು 80,000 ಎಕ್ಟರ್ ಪ್ರದೇಶದಲ್ಲಿ ವಿವಿಧ ಬೆಳೆಗಳು ಹಾನಿಯಾಗಿವೆ. ಕೂಡಲೇ ರಾಜ್ಯ ಸರ್ಕಾರ ಪ್ರತಿ ಹಳ್ಳಿ ಹಳ್ಳಿಗಳ ಅತಿವೃಷ್ಟಿ ಹಾನಿಯ ಬಗ್ಗೆ ಮಾಹಿತಿ ಪಡೆದು ರೈತರಿಗೆ ನೆರವಾಗಬೇಕು ಎಂದರು.

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಅಪಾರ ಹಾನಿಯಾಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.  ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ ವರ್ಷ ಬರ ಪರಿಹಾರ ವಿತರಣೆ ವೇಳೆ ಉಂಟಾದ ಎಡವಟ್ಟುಗಳು ಮರುಕಳಿಸದಂತೆ ಸರ್ಕಾರ ಎಚ್ಚರವಹಿಸಬೇಕು ಎಂದು ತಿಳಿಸಿದ್ದಾರೆ. ಬೆಳೆ ಹಾನಿ ಸಮೀಕ್ಷೆಯನ್ನು ಸಮಾರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಕೈಸೇರುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.  ವಾರದೊಳಗಡೆ ಪರಿಹಾರ ಹಣ ಕೈಸೇರಿದರೆ, ರೈತರು ದೀಪಾವಳಿ ಹಬ್ಬವನ್ನು ನೆಮ್ಮದಿಯಿಂದ ಆಚರಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror