ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ ಈ ಯೋಜನೆ ಜಾರಿಯಾಗುವಂತೆ ಮಾಡುವುದರ ಜೊತೆಗೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆ ಮಾಡಬೇಕು. ತಕ್ಷಣವೇ ಸರ್ಕಾರ ಗಮನಹರಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.
ಅಡಿಕೆ ಬೆಳೆಯು ಹವಾಮಾನ ಆಧಾರಿತವಾಗಿಯೇ ನಿರ್ಧಾರವಾಗುತ್ತದೆ. ಭಾರೀ ಮಳೆಯಾದರೆ ಅಡಿಕೆಗೆ ಕೊಳೆರೋಗ ಬಂದು ಇಡೀ ಫಸಲು ನಾಶವಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಳೆಗಾರರು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಕೊಳೆರೋಗ ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಬೇಕಾಗುತ್ತದೆ. ಆದರೆ ಇಂತಹ ವಿಮಾ ಯೋಜನೆಗಳು ಜಾರಿಯಾದರೆ ಸ್ವಲ್ಪಮಟ್ಟಿನ ಬೆಂಬಲ ಅಡಿಕೆ ಬೆಳೆಗಾರರಿಗೆ ಸಿಕ್ಕಿದಂತಾಗುತ್ತದೆ. ಹೀಗಾಗಿ ಉಪಯುಕ್ತವಾಗಿರುವ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆ ಅಡಿಕೆ ಬೆಳೆಗಾರರಿಗೂ ಅನ್ವಯವಾಗಬೇಕು. ಆದರೆ ಇದುವರೆಗೆ ಈ ಯೋಜನೆಗೆ ಪ್ರೀಮಿಯಂ ಪಾವತಿ ಮಾಡಲು ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.
ತಕ್ಷಣವೇ ಈ ಬಗ್ಗೆ ಸರ್ಕಾರ ಗಮನಹರಿಸಿ, ಸೂಕ್ತವಾದ ಸಮಯಾವಕಾಶದೊಂದಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ಅಡಿಕೆ ಬೆಳೆಗಾರರಿಗೆ ಜಾರಿಯಾಗಬೇಕು ಹಾಗೂ ಪ್ರೀಮಿಯಂ ಪಾವತಿಗೆ ಕಾಲಾವಕಾಶ ಸಿಗುವಂತಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…