ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ ಈ ಯೋಜನೆ ಜಾರಿಯಾಗುವಂತೆ ಮಾಡುವುದರ ಜೊತೆಗೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆ ಮಾಡಬೇಕು. ತಕ್ಷಣವೇ ಸರ್ಕಾರ ಗಮನಹರಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.
ಅಡಿಕೆ ಬೆಳೆಯು ಹವಾಮಾನ ಆಧಾರಿತವಾಗಿಯೇ ನಿರ್ಧಾರವಾಗುತ್ತದೆ. ಭಾರೀ ಮಳೆಯಾದರೆ ಅಡಿಕೆಗೆ ಕೊಳೆರೋಗ ಬಂದು ಇಡೀ ಫಸಲು ನಾಶವಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಳೆಗಾರರು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಕೊಳೆರೋಗ ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಬೇಕಾಗುತ್ತದೆ. ಆದರೆ ಇಂತಹ ವಿಮಾ ಯೋಜನೆಗಳು ಜಾರಿಯಾದರೆ ಸ್ವಲ್ಪಮಟ್ಟಿನ ಬೆಂಬಲ ಅಡಿಕೆ ಬೆಳೆಗಾರರಿಗೆ ಸಿಕ್ಕಿದಂತಾಗುತ್ತದೆ. ಹೀಗಾಗಿ ಉಪಯುಕ್ತವಾಗಿರುವ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆ ಅಡಿಕೆ ಬೆಳೆಗಾರರಿಗೂ ಅನ್ವಯವಾಗಬೇಕು. ಆದರೆ ಇದುವರೆಗೆ ಈ ಯೋಜನೆಗೆ ಪ್ರೀಮಿಯಂ ಪಾವತಿ ಮಾಡಲು ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.
ತಕ್ಷಣವೇ ಈ ಬಗ್ಗೆ ಸರ್ಕಾರ ಗಮನಹರಿಸಿ, ಸೂಕ್ತವಾದ ಸಮಯಾವಕಾಶದೊಂದಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ಅಡಿಕೆ ಬೆಳೆಗಾರರಿಗೆ ಜಾರಿಯಾಗಬೇಕು ಹಾಗೂ ಪ್ರೀಮಿಯಂ ಪಾವತಿಗೆ ಕಾಲಾವಕಾಶ ಸಿಗುವಂತಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ತಿಳಿಸಿದ್ದಾರೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…