ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ ಈ ಯೋಜನೆ ಜಾರಿಯಾಗುವಂತೆ ಮಾಡುವುದರ ಜೊತೆಗೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆ ಮಾಡಬೇಕು. ತಕ್ಷಣವೇ ಸರ್ಕಾರ ಗಮನಹರಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.
ಅಡಿಕೆ ಬೆಳೆಯು ಹವಾಮಾನ ಆಧಾರಿತವಾಗಿಯೇ ನಿರ್ಧಾರವಾಗುತ್ತದೆ. ಭಾರೀ ಮಳೆಯಾದರೆ ಅಡಿಕೆಗೆ ಕೊಳೆರೋಗ ಬಂದು ಇಡೀ ಫಸಲು ನಾಶವಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಳೆಗಾರರು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಕೊಳೆರೋಗ ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಬೇಕಾಗುತ್ತದೆ. ಆದರೆ ಇಂತಹ ವಿಮಾ ಯೋಜನೆಗಳು ಜಾರಿಯಾದರೆ ಸ್ವಲ್ಪಮಟ್ಟಿನ ಬೆಂಬಲ ಅಡಿಕೆ ಬೆಳೆಗಾರರಿಗೆ ಸಿಕ್ಕಿದಂತಾಗುತ್ತದೆ. ಹೀಗಾಗಿ ಉಪಯುಕ್ತವಾಗಿರುವ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆ ಅಡಿಕೆ ಬೆಳೆಗಾರರಿಗೂ ಅನ್ವಯವಾಗಬೇಕು. ಆದರೆ ಇದುವರೆಗೆ ಈ ಯೋಜನೆಗೆ ಪ್ರೀಮಿಯಂ ಪಾವತಿ ಮಾಡಲು ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.
ತಕ್ಷಣವೇ ಈ ಬಗ್ಗೆ ಸರ್ಕಾರ ಗಮನಹರಿಸಿ, ಸೂಕ್ತವಾದ ಸಮಯಾವಕಾಶದೊಂದಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ಅಡಿಕೆ ಬೆಳೆಗಾರರಿಗೆ ಜಾರಿಯಾಗಬೇಕು ಹಾಗೂ ಪ್ರೀಮಿಯಂ ಪಾವತಿಗೆ ಕಾಲಾವಕಾಶ ಸಿಗುವಂತಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ತಿಳಿಸಿದ್ದಾರೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…