ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ ಈ ಯೋಜನೆ ಜಾರಿಯಾಗುವಂತೆ ಮಾಡುವುದರ ಜೊತೆಗೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆ ಮಾಡಬೇಕು. ತಕ್ಷಣವೇ ಸರ್ಕಾರ ಗಮನಹರಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.
ಅಡಿಕೆ ಬೆಳೆಯು ಹವಾಮಾನ ಆಧಾರಿತವಾಗಿಯೇ ನಿರ್ಧಾರವಾಗುತ್ತದೆ. ಭಾರೀ ಮಳೆಯಾದರೆ ಅಡಿಕೆಗೆ ಕೊಳೆರೋಗ ಬಂದು ಇಡೀ ಫಸಲು ನಾಶವಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಳೆಗಾರರು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಕೊಳೆರೋಗ ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಬೇಕಾಗುತ್ತದೆ. ಆದರೆ ಇಂತಹ ವಿಮಾ ಯೋಜನೆಗಳು ಜಾರಿಯಾದರೆ ಸ್ವಲ್ಪಮಟ್ಟಿನ ಬೆಂಬಲ ಅಡಿಕೆ ಬೆಳೆಗಾರರಿಗೆ ಸಿಕ್ಕಿದಂತಾಗುತ್ತದೆ. ಹೀಗಾಗಿ ಉಪಯುಕ್ತವಾಗಿರುವ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆ ಅಡಿಕೆ ಬೆಳೆಗಾರರಿಗೂ ಅನ್ವಯವಾಗಬೇಕು. ಆದರೆ ಇದುವರೆಗೆ ಈ ಯೋಜನೆಗೆ ಪ್ರೀಮಿಯಂ ಪಾವತಿ ಮಾಡಲು ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.
ತಕ್ಷಣವೇ ಈ ಬಗ್ಗೆ ಸರ್ಕಾರ ಗಮನಹರಿಸಿ, ಸೂಕ್ತವಾದ ಸಮಯಾವಕಾಶದೊಂದಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ಅಡಿಕೆ ಬೆಳೆಗಾರರಿಗೆ ಜಾರಿಯಾಗಬೇಕು ಹಾಗೂ ಪ್ರೀಮಿಯಂ ಪಾವತಿಗೆ ಕಾಲಾವಕಾಶ ಸಿಗುವಂತಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…