ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ ಈ ಯೋಜನೆ ಜಾರಿಯಾಗುವಂತೆ ಮಾಡುವುದರ ಜೊತೆಗೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆ ಮಾಡಬೇಕು. ತಕ್ಷಣವೇ ಸರ್ಕಾರ ಗಮನಹರಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.
ಅಡಿಕೆ ಬೆಳೆಯು ಹವಾಮಾನ ಆಧಾರಿತವಾಗಿಯೇ ನಿರ್ಧಾರವಾಗುತ್ತದೆ. ಭಾರೀ ಮಳೆಯಾದರೆ ಅಡಿಕೆಗೆ ಕೊಳೆರೋಗ ಬಂದು ಇಡೀ ಫಸಲು ನಾಶವಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಳೆಗಾರರು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಕೊಳೆರೋಗ ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಬೇಕಾಗುತ್ತದೆ. ಆದರೆ ಇಂತಹ ವಿಮಾ ಯೋಜನೆಗಳು ಜಾರಿಯಾದರೆ ಸ್ವಲ್ಪಮಟ್ಟಿನ ಬೆಂಬಲ ಅಡಿಕೆ ಬೆಳೆಗಾರರಿಗೆ ಸಿಕ್ಕಿದಂತಾಗುತ್ತದೆ. ಹೀಗಾಗಿ ಉಪಯುಕ್ತವಾಗಿರುವ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆ ಅಡಿಕೆ ಬೆಳೆಗಾರರಿಗೂ ಅನ್ವಯವಾಗಬೇಕು. ಆದರೆ ಇದುವರೆಗೆ ಈ ಯೋಜನೆಗೆ ಪ್ರೀಮಿಯಂ ಪಾವತಿ ಮಾಡಲು ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.
ತಕ್ಷಣವೇ ಈ ಬಗ್ಗೆ ಸರ್ಕಾರ ಗಮನಹರಿಸಿ, ಸೂಕ್ತವಾದ ಸಮಯಾವಕಾಶದೊಂದಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ಅಡಿಕೆ ಬೆಳೆಗಾರರಿಗೆ ಜಾರಿಯಾಗಬೇಕು ಹಾಗೂ ಪ್ರೀಮಿಯಂ ಪಾವತಿಗೆ ಕಾಲಾವಕಾಶ ಸಿಗುವಂತಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ತಿಳಿಸಿದ್ದಾರೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…