ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ ಈ ಯೋಜನೆ ಜಾರಿಯಾಗುವಂತೆ ಮಾಡುವುದರ ಜೊತೆಗೆ ಪ್ರೀಮಿಯಂ ಪಾವತಿ ದಿನ ವಿಸ್ತರಣೆ ಮಾಡಬೇಕು. ತಕ್ಷಣವೇ ಸರ್ಕಾರ ಗಮನಹರಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.
ಅಡಿಕೆ ಬೆಳೆಯು ಹವಾಮಾನ ಆಧಾರಿತವಾಗಿಯೇ ನಿರ್ಧಾರವಾಗುತ್ತದೆ. ಭಾರೀ ಮಳೆಯಾದರೆ ಅಡಿಕೆಗೆ ಕೊಳೆರೋಗ ಬಂದು ಇಡೀ ಫಸಲು ನಾಶವಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಳೆಗಾರರು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಕೊಳೆರೋಗ ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಬೇಕಾಗುತ್ತದೆ. ಆದರೆ ಇಂತಹ ವಿಮಾ ಯೋಜನೆಗಳು ಜಾರಿಯಾದರೆ ಸ್ವಲ್ಪಮಟ್ಟಿನ ಬೆಂಬಲ ಅಡಿಕೆ ಬೆಳೆಗಾರರಿಗೆ ಸಿಕ್ಕಿದಂತಾಗುತ್ತದೆ. ಹೀಗಾಗಿ ಉಪಯುಕ್ತವಾಗಿರುವ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆ ಅಡಿಕೆ ಬೆಳೆಗಾರರಿಗೂ ಅನ್ವಯವಾಗಬೇಕು. ಆದರೆ ಇದುವರೆಗೆ ಈ ಯೋಜನೆಗೆ ಪ್ರೀಮಿಯಂ ಪಾವತಿ ಮಾಡಲು ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.
ತಕ್ಷಣವೇ ಈ ಬಗ್ಗೆ ಸರ್ಕಾರ ಗಮನಹರಿಸಿ, ಸೂಕ್ತವಾದ ಸಮಯಾವಕಾಶದೊಂದಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ಅಡಿಕೆ ಬೆಳೆಗಾರರಿಗೆ ಜಾರಿಯಾಗಬೇಕು ಹಾಗೂ ಪ್ರೀಮಿಯಂ ಪಾವತಿಗೆ ಕಾಲಾವಕಾಶ ಸಿಗುವಂತಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ತಿಳಿಸಿದ್ದಾರೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…